ಬಿಜೆಪಿ ಶಾಸಕ ಮುನಿರತ್ನ  
ರಾಜ್ಯ

ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನಗೆ 14 ದಿನ ಅಂದರೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇಂದು ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ಅವರ ಪರ ವಕೀಲರು ಕೋರ್ಟ್​​ಗೆ ಮನವಿ ಮಾಡಿದ್ದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ತಮ್ಮ ಮೇಲೆ ಮುನಿರತ್ನ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಿ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.

ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ನಂತರ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT