ಹೈಕೋರ್ಟ್ 
ರಾಜ್ಯ

ಓಲಾ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಪಾವತಿ ಆದೇಶಕ್ಕೆ ಹೈಕೋರ್ಟ್ ತಡೆ

2019ರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಕೋರಿ ಸಂತ್ರಸ್ತೆಯು ಎಎನ್​ಐ ಟೆಕ್ನಾಲಜೀಸ್​ಗೆ ದೂರು ನೀಡಿದ್ದರು.

ಬೆಂಗಳೂರು: ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ 5 ಲಕ್ಷ ರೂ. ಪಾವತಿಸಲು ಆದೇಶಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಎಎನ್‌ಐ ಟೆಕ್ನಾಲಜೀಸ್​ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್​​ಆರ್​ ಕೃಷ್ಣ ಕುಮಾರ್‌ ಮತ್ತು ಎಂ.ಜಿ. ಉಮಾ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ವೇಳೆ ಮೇಲ್ಮನವಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರು, ಇದು 5 ಲಕ್ಷ ಪರಿಹಾರ ಪಾವತಿಸುವ ವಿಚಾರವಲ್ಲ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯಿದೆ 2013ರ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರವಾಗಿದೆ. ನಾವು ಚಾಲಕರಿಗೆ ಉದ್ಯೋಗ ನೀಡಿಲ್ಲ. ಓಲಾ ಸೇವೆಯನ್ನು ಚಾಲಕರು ಬಳಸಿಕೊಳ್ಳುತ್ತಾರೆ. ಚಾಲಕರು ಸ್ವತಂತ್ರ ಗುತ್ತಿಗೆದಾರರಾಗಿದ್ದಾರೆ ಎಂದು ಹೇಳಿದರು.

ಇದನ್ನು ಸೂಕ್ಷ್ಮವಾಗಿ ಗಮಿಸಿದ ನ್ಯಾಯಪೀಠ, ಪ್ರಕರಣದ ವಿಚಾರಣೆ ಅಗತ್ಯವಿದೆ. ಹೀಗಾಗಿ, ಸದ್ಯಕ್ಕೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ, ಪ್ರತಿವಾದಿಗಳಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್‌ 28ಕ್ಕೆ ಮುಂದೂಡಿತು.

2019ರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಕೋರಿ ಸಂತ್ರಸ್ತೆಯು ಎಎನ್​ಐ ಟೆಕ್ನಾಲಜೀಸ್​ಗೆ ದೂರು ನೀಡಿದ್ದರು.

ಆಂತರಿಕ ದೂರುಗಳ ಸಮಿತಿಯು ತಮ್ಮ ದೂರನ್ನು ಪರಿಗಣಿಸಿ ಅದರ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ಹೊಂದಿಲ್ಲ ಎಂದು ಕಂಪನಿ ಸಂತ್ರಸ್ತೆಗೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಏಕಸದಸ್ಯ ಪೀಠ ಪುರಸ್ಕರಿಸಿತ್ತು.

ಪ್ರಕರಣದ ಸಂಬಂಧ ಸೆಪ್ಟೆಂಬರ್‌ 30ರಂದು ವಿಚಾರಣೆ ನಡೆಸಿದ ಏಕಸದಸ್ಯ ಪೀಠವು, 5 ಲಕ್ಷ ಪರಿಹಾರ ಹಣವಲ್ಲದೇ ಸಂತ್ರಸ್ತೆಗೆ ವ್ಯಾಜ್ಯ ವೆಚ್ಚವಾಗಿ ಹೆಚ್ಚುವರಿ 50 ಸಾವಿರ ಮೊತ್ತವನ್ನು ಕಂಪನಿ ಪಾವತಿಸಬೇಕು. ಅಲ್ಲದೇ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಯವರು ವೈಯಕ್ತಿಕವಾಗಿ 1 ಲಕ್ಷ ಹಣವನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ಸಂತ್ರಸ್ತೆ ನೀಡಿದ ದೂರಿನ ಕುರಿತು ಕಂಪನಿಯ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸಬೇಕು. ಆ ವಿಚಾರಣಾ ಪ್ರಕ್ರಿಯೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. ಬೆಂಗಳೂರು ನಗರ ಜಿಲ್ಲಾಧಿಕಾರಿ ಸಮಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel