ಮೈಸೂರು ದಸರಾ 
ರಾಜ್ಯ

ಮೈಸೂರು ದಸರಾ 2024: ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧ ಚಿತ್ರ ಆಯ್ಕೆ

108 ಅಡಿ ಎತ್ತರದ ಶಿವಲಿಂಗ ಮತ್ತು ನಂದಿ ಜನಪ್ರಿಯ ಆಕರ್ಷಣೆಯಾಗಿದ್ದು, ರಾಜ್ಯದಿಂದ ಮಾತ್ರವಲ್ಲದೆ ರಾಷ್ಟ್ರದ ಇತರ ಭಾಗಗಳಿಂದಲೂ ಭಕ್ತರನ್ನು ಸೆಳೆಯುತ್ತದೆ.

ಕೋಲಾರ: ಅಕ್ಟೋಬರ್ 12 ರಂದು ನಡೆಯಲಿರುವ ವಿಶ್ವ ವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧ ಚಿತ್ರ ಆಯ್ಕೆಯಾಗಿದೆ.

ಈ ಕುರಿತು TNIE ಯೊಂದಿಗೆ ಮಾತನಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಮ್ ಪಾಷಾ, ಕೈಗಾರಿಕಾ ಉಪನಿರ್ದೇಶಕ ರವಿಚಂದ್ರ ನೇತೃತ್ವದ ತಂಡ ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಹೆಚ್. ಸಿ. ಮಹದೇವಪ್ಪ ಮತ್ತು ಜಿಲ್ಲಾಧಿಕಾರಿ ನೇತೃತ್ವದ ಮೈಸೂರು ದಸರಾ ಆಯ್ಕೆ ಸಮಿತಿ ಮುಂದಿಟ್ಟಿದ್ದರು. ಈ ಪೈಕಿ ಕೋಲಾರ ಜಿಲ್ಲೆಯನ್ನು ಪ್ರತಿನಿಧಿಸಲು ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರವನ್ನು ಸಮಿತಿಯವರು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

ಕೋಲಾರ ಜಿಲ್ಲಾ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ರವಿಚಂದ್ರ ಮಾತನಾಡಿ, ತಮ್ಮ ನೇತೃತ್ವದ ತಂಡವೊಂದು ಮೈಸೂರಿನಲ್ಲಿ ಮೊಕ್ಕಾಂ ಹೂಡಿದೆ. ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದು ಮೈಸೂರಿನಲ್ಲಿಯೇ ಕೆಲಸ ಕೈಗೆತ್ತಿಕೊಳ್ಳಲಾಗುವುದು. ವಿಜಯದಶಮಿಯ ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಪ್ರದರ್ಶನ ಇರಲಿದೆ ಎಂದು ತಿಳಿಸಿದರು.

ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ

ದೇವಸ್ಥಾನದ ಆಡಳಿತಾಧಿಕಾರಿ ಕುಮಾರಿ ಮಾತನಾಡಿ, ಸಾಂಬಶಿವಮೂರ್ತಿ ಸ್ವಾಮೀಜಿಯವರು ದೇವಸ್ಥಾನದಲ್ಲಿ ಸಾವಿರಾರು ಶಿವಲಿಂಗಗಳನ್ನು ಹೊಂದಿರುವ ದೇವಸ್ಥಾನವನ್ನು ನಿರ್ಮಿಸಿದ್ದಾರೆ. 108 ಅಡಿ ಎತ್ತರದ ಶಿವಲಿಂಗ ಮತ್ತು ನಂದಿ ಜನಪ್ರಿಯ ಆಕರ್ಷಣೆಯಾಗಿದ್ದು, ರಾಜ್ಯದಿಂದ ಮಾತ್ರವಲ್ಲದೆ ರಾಷ್ಟ್ರದ ಇತರ ಭಾಗಗಳಿಂದಲೂ ಭಕ್ತರನ್ನು ಸೆಳೆಯುತ್ತದೆ. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT