FIR 
ರಾಜ್ಯ

ಮಂಗಳೂರು: ದ್ವೇಷ ಭಾಷಣ ಮಾಡಿದ ಶಿಕ್ಷಕನ ವಿರುದ್ಧ FIR ದಾಖಲು

ಮಂಗಳೂರು ನಗರದ ಹೊರವಲಯದ ಕಿನ್ಯದ ಕೇಶವ ಶಿಶು ಮಂದಿರದಲ್ಲಿ ಇತ್ತೀಚಿಗೆ ನಡೆದ ನವ ದಂಪತಿಗಳ ಸಮಾವೇಶದಲ್ಲಿ ಮಾತನಾಡಿದ್ದ ಡಾ. ಅರುಣ್ ಉಳ್ಳಾಲ್ ಎಂಬುವವರು ದ್ವೇಷ ಭಾಷಣ ಮಾಡಿದ್ದರು.

ಮಂಗಳೂರು: ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸದಂತೆ ಹಿಂದೂಗಳಿಗೆ ಸಲಹೆ ನೀಡಿದ ಮಂಗಳೂರಿನ ಖಾಸಗಿ ಕಾಲೇಜಿನ ಉಪನ್ಯಾಸಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಂಗಳೂರು ನಗರದ ಹೊರವಲಯದ ಕಿನ್ಯದ ಕೇಶವ ಶಿಶು ಮಂದಿರದಲ್ಲಿ ಇತ್ತೀಚಿಗೆ ನಡೆದ ನವ ದಂಪತಿಗಳ ಸಮಾವೇಶದಲ್ಲಿ ಮಾತನಾಡಿದ್ದ ಡಾ. ಅರುಣ್ ಉಳ್ಳಾಲ್ ಎಂಬುವವರು ದ್ವೇಷ ಭಾಷಣ ಮಾಡಿದ್ದರು.

ಹಿಂದುಗಳು, ಹಿಂದು ಮಾಲಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು, ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು, ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು, ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ. ಮಂಗಳೂರಿನಲ್ಲಿ ಅನೇಕ ಹಿಂದೂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಕೊರತೆಯಿಂದ ಬಳಲುತ್ತಿದ್ದರೆ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿವೆ ಎಂದು ಹೇಳಿದ್ದರು. ಈ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಪೊಲೀಸರು ಅರುಣ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಧರ್ಮ ದ್ವೇಷದ ಭಾಷಣ ಮಾಡಿದ ಶಿಕ್ಷಕ ಡಾ. ಅರುಣ್ ಉಳ್ಳಾಲ್ ಎಬಾಂತನ ಮೇಲೆ ದಿನಾಂಕ 05/10/2024 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂ 118/2024 ಕಲಂ; 66(C) IT ACT AND 196,351 (BNS), 2023 ರಂತೆ ಪ್ರಕರಣ ದಾಖಲು ಮಾಡಲಾಗಿದೆ” ಎಂದು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ