ಭೈರತಿ ಸುರೇಶ್ 
ರಾಜ್ಯ

ಮುಡಾ ಹಗರಣ: ಸಚಿವ ಭೈರತಿ ಸುರೇಶ್, ಲೋಕಾಯುಕ್ತ SP ವಿರುದ್ಧ DGPಗೆ ಸ್ನೇಹಮಯಿ ಕೃಷ್ಣ ದೂರು

ಡಿಜಿಪಿ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್​​ಪಿ ಸಜಿತ್ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ದೂರು ನೀಡಿದ್ದಾರೆ.

ಡಿಜಿಪಿ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಕಳೆದ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ಲೋಕಾಯುಕ್ತ ನಿರ್ಧರಿಸಿತ್ತು. ಈ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಎಸ್ ಪಿ ಸಜಿತ್ ಅವರು ಭೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು.

ಈ ವಿಚಾರ ತಿಳಿದ ಕೂಡಲೇ ಭೈರತಿ ಸುರೇಶ್‌ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಅದೇ ದಾಖಲೆಗಳನ್ನ ಬಿಡುಗಡೆ ಮಾಡಿದ್ದರು. ಸಚಿವರು ದಾಖಲೆಗಳನ್ನ ತೆಗೆದುಕೊಂಡು‌ ಹೋಗಲು ಲೋಕಾಯುಕ್ತ ಎಸ್ಪಿ ಸಹಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕಾರಣಕ್ಕಾಗಿ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಸಜಿತ್ ಅವರು ವರ್ಗಾವಣೆಗೆ ಗುರಿಯಾಗಿದ್ದರು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT