ಭೈರತಿ ಸುರೇಶ್ 
ರಾಜ್ಯ

ಮುಡಾ ಹಗರಣ: ಸಚಿವ ಭೈರತಿ ಸುರೇಶ್, ಲೋಕಾಯುಕ್ತ SP ವಿರುದ್ಧ DGPಗೆ ಸ್ನೇಹಮಯಿ ಕೃಷ್ಣ ದೂರು

ಡಿಜಿಪಿ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್​​ಪಿ ಸಜಿತ್ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ದೂರು ನೀಡಿದ್ದಾರೆ.

ಡಿಜಿಪಿ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಕಳೆದ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ಲೋಕಾಯುಕ್ತ ನಿರ್ಧರಿಸಿತ್ತು. ಈ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಎಸ್ ಪಿ ಸಜಿತ್ ಅವರು ಭೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು.

ಈ ವಿಚಾರ ತಿಳಿದ ಕೂಡಲೇ ಭೈರತಿ ಸುರೇಶ್‌ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಅದೇ ದಾಖಲೆಗಳನ್ನ ಬಿಡುಗಡೆ ಮಾಡಿದ್ದರು. ಸಚಿವರು ದಾಖಲೆಗಳನ್ನ ತೆಗೆದುಕೊಂಡು‌ ಹೋಗಲು ಲೋಕಾಯುಕ್ತ ಎಸ್ಪಿ ಸಹಕರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕಾರಣಕ್ಕಾಗಿ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಸಜಿತ್ ಅವರು ವರ್ಗಾವಣೆಗೆ ಗುರಿಯಾಗಿದ್ದರು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT