ನಾಪತ್ತೆಯಾದ ಮುಮ್ತಾಜ್ ಅಲಿಗೆ ನದಿಯಲ್ಲಿ ಹುಡುಕಾಟ ಮತ್ತು ಬಲ ಚಿತ್ರದಲ್ಲಿ ಸೇತುವೆ ಮೇಲೆ ನಜ್ಜುಗುಜ್ಜಾದ ಕಾರು  
ರಾಜ್ಯ

ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಸೋದರ ಮುಮ್ತಾಜ್ ಅಲಿ ನಾಪತ್ತೆ; ಕೂಳೂರು ಸೇತುವೆ ಬಳಿ ಕಾರು ಪತ್ತೆ

ಮುಮ್ತಾಜ್ ನಾಪತ್ತೆಯಾಗಿದ್ದು, ಅವರು ನದಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹೀಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಸೋದರ ಮುಮ್ತಾಜ್ ಅಲಿಯ ಕಾರು ಕೂಳೂರು ಸೇತುವೆ ಬಳಿ ಇಂದು ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.

ಮುಮ್ತಾಜ್ ನಾಪತ್ತೆಯಾಗಿದ್ದು, ಅವರು ನದಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹೀಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಕೂಳೂರು ನದಿಯ ಸೇತುವೆ ಬಳಿ ಕಪ್ಪು ಬಣ್ಣದ ಬಿಎಂಡಬ್ಲ್ಯು ಕಾರು ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅದು ಮುಮ್ತಾಜ್ ಅಲಿ ಅವರದ್ದು ಎಂದು ಗೊತ್ತಾಗಿದೆ. ಅವರಿಗಾಗಿ ಅಗ್ನಿಶಾಮಕ ಮತ್ತು ತುರ್ತು ಸೇವಾ ತಂಡದವರು ಹಾಗೂ ನಮ್ಮ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪಣಂಬೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಕಾರು ಸೇತುವೆಯ ಮಧ್ಯಭಾಗದಲ್ಲಿ ನಿಂತಿದೆ. ವಾಹನ ಸಂಚಾರಕ್ಕೆ ಅಡಚಣೆಯಾಗಬಾರದೆಂದು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಅಪಘಾತಕ್ಕೆ ಈಡಾಗಿದೆ ಎನ್ನಬಹುದು.

ಮಂಗಳೂರು ಉತ್ತರ ಭಾಗದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಮ್ತಾಜ್ ಅಲಿ ಅವರು ಇಂದು ನಸುಕಿನ ಜಾವ 3 ಗಂಟೆಗೆ ಮನೆಯಿಂದ ಹೊರಟಿದ್ದರು. 5 ಗಂಟೆ ವೇಳೆಗೆ ಕೂಳೂರು ಸೇತುವೆ ಬಳಿ ಕಾರು ಮಾತ್ರ ಪತ್ತೆಯಾಗಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಇಂದು ಮುಂಜಾನೆ ನಮಗೆ ಮಾಹಿತಿ ಬಂದಿದ್ದು, ಕುಳೂರು ಸೇತುವೆ ಬಳಿ ಉದ್ಯಮಿ ಮುಮ್ತಾಜ್ ಅಲಿ ಅವರ ವಾಹನ ಪತ್ತೆಯಾಗಿದೆ. ಅವರು ಸೇತುವೆಯಿಂದ ಜಿಗಿದಿರಬಹುದು. ಸ್ಥಳೀಯ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ತನಿಖೆಯಂತೆ, 3 ಗಂಟೆ ಸುಮಾರಿಗೆ, ಅವರು ಮನೆಯಿಂದ ಹೊರಟು 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಬಂದಿರಬಹುದು ಎಂದು ಅವರ ಪುತ್ರಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂದರು ಕಾವಲು ಪಡೆ ತಂಡಗಳು ನದಿಯಲ್ಲಿ ಶೋಧ ನಡೆಸುತ್ತಿವೆ. ಅವರು ನದಿಗೆ ಹಾರಿದ್ದಾರೆಯೇ ಅಥವಾ ಬೇರೆಡೆಗೆ ಹೋಗಿದ್ದಾರೆಯೇ, ಏನು ಘಟನೆ ನಡೆಯುತ್ತಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT