ಸಂಗ್ರಹ ಚಿತ್ರ online desk
ರಾಜ್ಯ

ಬೆಂಗಳೂರು: ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ

ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳ ಅಕ್ರಮ ತಂಗಿದ್ದ ಪ್ರಕರಣದಲ್ಲಿ ಜಿಗಣಿ ಪೊಲೀಸರು ಪ್ರಮುಖ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯು ಇತ್ತೀಚೆಗೆ ಬಂಧಿಸಲಾದ ಎರಡು ಪಾಕಿಸ್ತಾನಿ ಕುಟುಂಬಗಳಿಗೆ ನಕಲಿ ಗುರುತಿನ ದಾಖಲೆಗಳನ್ನು ಒದಗಿಸುವ ಮೂಲಕ ಮತ್ತು ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್‌ಗಳನ್ನು ಪಡೆಯಲು ಸಹಾಯ ಮಾಡಿದ್ದಾನೆ.

ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಆತನನ್ನು ಬಂಧಿಸಲಾಗಿದೆ. ನಕಲಿ ಆಧಾರ್ ಕಾರ್ಡ್‌ಗಳು, ಭಾರತೀಯ ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಡ್ರೈವಿಂಗ್ ಲೈಸೆನ್ಸ್‌ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.

ಬಂಧಿತ ಆರೋಪಿ ಭಾರತದಲ್ಲಿ ಮೆಹದಿ ಫೌಂಡೇಶನ್‌ನ ಮುಖ್ಯಸ್ತನಾಗಿದ್ದಾನೆ ಎಂದು ವರದಿಯಾಗಿದೆ. ಧಾರ್ಮಿಕ ಮುಖಂಡ ಯೂನಸ್ ಅಲ್-ಗೋಹರ್ ಅವರ ಬೋಧನೆಗಳನ್ನು ಪ್ರಚಾರ ಮಾಡುತ್ತಿದ್ದ ಈ ಹಿಂದೆ ಬಂಧಿತ ವ್ಯಕ್ತಿಗಳು ಪರ್ವೇಜ್ ನೊಂದಿಗೆ ಸಂಪರ್ಕದಲ್ಲಿದ್ದರು, ಆತನ ಸೂಚನೆಗಳ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ, ಬಂಧಿತ ವ್ಯಕ್ತಿಗಳು ಭಾರತದಾದ್ಯಂತ ಹಲವಾರು ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳು ವಾಸಿಸುತ್ತಿದ್ದಾರೆ ಎಂದು ಹೇಳಿದ್ದಾನೆ. ಜಿಗಣಿ ಪೊಲೀಸರು ಪರ್ವೇಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಹಿಂದೂ ಹೆಸರಿನಲ್ಲಿ ವಾಸಿಸುತ್ತಿದ್ದ ಎರಡು ಪಾಕಿಸ್ತಾನಿ ಕುಟುಂಬಗಳನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ, ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT