ಸಂಗ್ರಹ ಚಿತ್ರ online desk
ರಾಜ್ಯ

ಬೆಂಗಳೂರು: ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ

ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳ ಅಕ್ರಮ ತಂಗಿದ್ದ ಪ್ರಕರಣದಲ್ಲಿ ಜಿಗಣಿ ಪೊಲೀಸರು ಪ್ರಮುಖ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯು ಇತ್ತೀಚೆಗೆ ಬಂಧಿಸಲಾದ ಎರಡು ಪಾಕಿಸ್ತಾನಿ ಕುಟುಂಬಗಳಿಗೆ ನಕಲಿ ಗುರುತಿನ ದಾಖಲೆಗಳನ್ನು ಒದಗಿಸುವ ಮೂಲಕ ಮತ್ತು ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್‌ಗಳನ್ನು ಪಡೆಯಲು ಸಹಾಯ ಮಾಡಿದ್ದಾನೆ.

ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಆತನನ್ನು ಬಂಧಿಸಲಾಗಿದೆ. ನಕಲಿ ಆಧಾರ್ ಕಾರ್ಡ್‌ಗಳು, ಭಾರತೀಯ ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಡ್ರೈವಿಂಗ್ ಲೈಸೆನ್ಸ್‌ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.

ಬಂಧಿತ ಆರೋಪಿ ಭಾರತದಲ್ಲಿ ಮೆಹದಿ ಫೌಂಡೇಶನ್‌ನ ಮುಖ್ಯಸ್ತನಾಗಿದ್ದಾನೆ ಎಂದು ವರದಿಯಾಗಿದೆ. ಧಾರ್ಮಿಕ ಮುಖಂಡ ಯೂನಸ್ ಅಲ್-ಗೋಹರ್ ಅವರ ಬೋಧನೆಗಳನ್ನು ಪ್ರಚಾರ ಮಾಡುತ್ತಿದ್ದ ಈ ಹಿಂದೆ ಬಂಧಿತ ವ್ಯಕ್ತಿಗಳು ಪರ್ವೇಜ್ ನೊಂದಿಗೆ ಸಂಪರ್ಕದಲ್ಲಿದ್ದರು, ಆತನ ಸೂಚನೆಗಳ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ, ಬಂಧಿತ ವ್ಯಕ್ತಿಗಳು ಭಾರತದಾದ್ಯಂತ ಹಲವಾರು ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳು ವಾಸಿಸುತ್ತಿದ್ದಾರೆ ಎಂದು ಹೇಳಿದ್ದಾನೆ. ಜಿಗಣಿ ಪೊಲೀಸರು ಪರ್ವೇಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಹಿಂದೂ ಹೆಸರಿನಲ್ಲಿ ವಾಸಿಸುತ್ತಿದ್ದ ಎರಡು ಪಾಕಿಸ್ತಾನಿ ಕುಟುಂಬಗಳನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ, ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ