ಸಂಗ್ರಹ ಚಿತ್ರ 
ರಾಜ್ಯ

ಹಳಸಿದ ಕೇಕ್ ತಿಂದು 5 ವರ್ಷದ ಮಗು ಸಾವು: ಪೋಷಕರಿಗೆ ICU ನಲ್ಲಿ ಚಿಕಿತ್ಸೆ

ಮೂವರಿಗೂ ಹಳಸಿದ ಕೇಕ್ ತಿಂದ ಕೂಡಲೇ ವಾಂತಿ ಹಾಗೂ ಅತಿಸಾರದ ಲಕ್ಷಣಗಳು ಕಂಡು ಬಂದಿದೆ. ಕೇಕ್ ಜೊತೆಗೆ ಅನ್ನ ಹಾಗೂ ಹಪ್ಪಳವನ್ನು ಸೇವನೆ ಮಾಡಿರುವುದಾಗಿ ಬಾಲಕನ ತಂದೆ ಹೇಳಿಕೊಂಡಿದ್ದಾರೆ.

ಬೆಂಗಳೂರು: ಹಳಸಿದ ಕೇಸ್ ತಿಂದು 5 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆಯೊಂದು ಕೆಪಿ ಅಗ್ರಹಾರದ ಭುವನೇಶ್ವರಿ ನಗರದಲ್ಲಿ ಸೋಮವಾರ ನಡೆದಿದೆ.

ಮೃತ ಬಾಲಕನನ್ನು ಬಿ.ಧೀರಜ್ ಎಂದು ಗುರ್ತಿಸಲಾಗಿದೆ. ವಿಷಯುಕ್ತ ಆಹಾರ ಸೇವನೆಯೇ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ.

ಈ ನಡುವೆ ಬಾಲಕನ ಪೋಷಕರಾದ ಬಾಲರಾಜ್ (42) ಹಾಗೂ ತಾಯಿ ನಾಗಲಕ್ಷ್ಮೀ (35) ಅವರಿಗ ವಿವಿ ಪುರಂನ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಮೂವರಿಗೂ ಹಳಸಿದ ಕೇಕ್ ತಿಂದ ಕೂಡಲೇ ವಾಂತಿ ಹಾಗೂ ಅತಿಸಾರದ ಲಕ್ಷಣಗಳು ಕಂಡುಬಂದಿದೆ. ಕೇಕ್ ಜೊತೆಗೆ ಅನ್ನ ಹಾಗೂ ಹಪ್ಪಳವನ್ನು ಸೇವನೆ ಮಾಡಿರುವುದಾಗಿ ಬಾಲಕನ ತಂದೆ ಹೇಳಿಕೊಂಡಿದ್ದಾರೆ.

ಬೆಳಿಗ್ಗೆ 9.30ರ ಸುಮಾರಿಗೆ ದೂರವಾಣಿ ಕರೆ ಬಂದಿತ್ತು. ಬಳಿಕ ಕೆಂಗೇರಿಯಲ್ಲಿದ್ದ ಮಗನ ಮನೆಗೆ ಹೋಗಿ, ಅಲ್ಲಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿದೆವು. ಆಸ್ಪತ್ರೆಯಲ್ಲಿ ಮಗ ಬಾಲರಾಜ್ ಮಧ್ಯಾಹ್ನ ಊಟಕ್ಕೆ ಮನೆಯ ಬಳಿಯ ಅಂಗಡಿಯಿಂದ ಹಪ್ಪಳ ಖರೀದಿಸಿರುವುದಾಗಿ ಹಾಗೂ ನಾನು ಮೂರು, ಹೆಂಡತಿ ಎರಡು ಹಾಗೂ ಪುತ್ರ ಧೀರಜ್ ಒಂದು ಹಪ್ಪಳ ಸೇವನೆ ಮಾಡಿರುವುದಾಗಿ ಹೇಳಿದ್ದ. ಹಪ್ಪಳ ತಿಂದ ಬಳಿಕ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಸಾಮಾನ್ಯ ಎಂದು ನಿರ್ಲಕ್ಷಿಸಿದ್ದೆವು. ಸಂಜೆ ಕೇಕ್ ತಿಂದ ಬಳಿಕ ಹೊಟ್ಟೆನೋವು ತೀವ್ರಗೊಂಡಿತ್ತು ಎಂದು ಬಾಲರಾಜ್ ಹೇಳಿದ ಎಂದು ಅವರ ತಾಯಿ ಚಾಮುಂಡೇಶ್ವರಿಯವರು ಹೇಳಿದ್ದಾರೆ.

ಮೊಮ್ಮಗಳು ನನ್ನೊಂದಿಗೆ ಇದ್ದಳು. ಹೀಗಾಗಿ ಆಕೆ ಅದೃಷ್ಟವಶಾತ್ ಪಾರಾಗಿದ್ದಾಳೆಂದು ಚಾಮುಂಡೇಶ್ವರಿ ತಿಳಿಸಿದ್ದಾರೆ.

ಅತಿಸಾರ ಹಿನ್ನೆಲೆಯಲ್ಲಿ ಮೂವರೂ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಕಾಯಲಾಗುತ್ತಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣಗಳು ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ಆಸ್ಪತ್ರೆ ಅಧಿಕಾರಿಗಳು ಮೆಡಿಕೋ ಲೀಗಲ್ ಪ್ರಕರಣ ದಾಖಲಿಸಿಕೊಂಡು ಕೆಪಿ ಅಗ್ರಹಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಇದೀಗ ಪ್ರಕರಣ ದಾಖಲಿಸಿಕೊಳ್ಳಬೇಕಾಗಿದ್ದು, ಎಲ್ಲಾ ಆಯಾಮಗಳಿಂದಲೂ ಪ್ರಕರಣ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT