ಸ್ವಾಮಿಜಿಯೊಂದಿಗೆ ಪಿಬಿ ಓಸ್ವಾಲ್ ಜೈನ್‌ 
ರಾಜ್ಯ

ರಾಮನಗರ: ಪಾಲನಹಳ್ಳಿ ಮಠಕ್ಕೆ ಬರೋಬ್ಬರಿ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ!

ಹೌದು, ಆಶ್ಚರ್ಯವಾದರೂ ಇದು ನಿಜ. ಉದ್ಯಮಿ ಪಿಬಿ ಓಸ್ವಾಲ್ ಜೈನ್‌ ಅವರು ವ್ಯಾಪಾರ ವಹಿವಾಟಿನಿಂದ ಸಂಪಾದಿಸಿದ ಆಸ್ತಿ ಸಂಪತ್ತೆಲ್ಲವನ್ನೂ ದಾನದ ರೂಪದಲ್ಲಿ ಮಠಕ್ಕೆ ದೇಣಿಗೆ ನೀಡಿದ್ದಾರೆ.

ರಾಮನಗರ: ರಾಜಸ್ಥಾನದ ಗಣಿ ಉದ್ಯಮಿಯೊಬ್ಬರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ‌ ಪಾಲನಹಳ್ಳಿ ಮಠಕ್ಕೆ ಬರೋಬ್ಬರಿ ಮೂರು ಸಾವಿರ ಎಕರೆ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಹೌದು, ಆಶ್ಚರ್ಯವಾದರೂ ಇದು ನಿಜ. ಉದ್ಯಮಿ ಪಿಬಿ ಓಸ್ವಾಲ್ ಜೈನ್‌ ಅವರು ವ್ಯಾಪಾರ ವಹಿವಾಟಿನಿಂದ ಸಂಪಾದಿಸಿದ ಆಸ್ತಿ ಸಂಪತ್ತೆಲ್ಲವನ್ನೂ ದಾನದ ರೂಪದಲ್ಲಿ ಮಠಕ್ಕೆ ದೇಣಿಗೆ ನೀಡಿದ್ದಾರೆ. ಇದೀಗ ಆಸ್ತಿಯ ದಾಖಲೆಗಳನ್ನ ಮಠಕ್ಕೆ ‌ಒಪ್ಪಿಸಿದ ಅವರು, ತಮ್ಮ ಸ್ವಯಾರ್ಜಿತ ಆಸ್ತಿ ಮಾತ್ರ ಇಬ್ಬರು ಮಕ್ಕಳಿಗೆ ಕೊಟ್ಟಿದ್ದಾರೆ.

78 ವರ್ಷದ ರಾಜಸ್ಥಾನದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಪಾಲನಹಳ್ಳಿ ಮಠದ ಪೀಠಾಧ್ಯಕ್ಷರಾದ ಡಾ. ಸಿದ್ದರಾಜ ಸ್ವಾಮೀಜಿ ಅವರಿಗೆ ಆಸ್ತಿ‌ ಪತ್ರ ಹಸ್ತಾಂತರಿಸಿದ್ದಾರೆ. ಕಾನೂನಾತ್ಮಕವಾಗಿ ಆಸ್ತಿ ಹಸ್ತಾಂತರ ಮಾಡಿರೋ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್, ಕಳೆದ 27 ವರ್ಷಗಳಿಂದ ಪಾಲನಹಳ್ಳಿ ಮಠದ ಜೊತೆ ಒಡನಾಟ ಹೊಂದಿದ್ದರು ಎನ್ನಲಾಗಿದೆ.

ಓಸ್ವಾಲ್‌ ಜೈನ್‌ ಅವರು ತಾವು ಕಂಪನಿ ಆರಂಭಿಸಿದ ದಿನದಿಂದಲೂ ಈ ಮಠದ ಶ್ರೀಗಳ ಮಾರ್ಗದರ್ಶನ ಪಡೆದುಕೊಂಡು ಮುನ್ನಡೆಯುತ್ತಿದ್ದಾರೆ. ಅದರಂತೆ ಮಠದ ಶ್ರೀಗಳ ಮಾರ್ಗದರ್ಶನದಿಂದ ಈ ಯಶಸ್ಸು ಸಿಕ್ಕಿದೆ. ಹಾಗಾಗಿ ಮೋಕ್ಷ ಸಾಧನೆಗಾಗಿಯೇ ಮಠಕ್ಕೆ ಆಸ್ತಿ ಬರೆದುಕೊಟ್ಟಿರುವುದಾಗಿ ಉದ್ಯಮಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

SCROLL FOR NEXT