ಲೋಕಾಯುಕ್ತ  
ರಾಜ್ಯ

Lokayukta raid: ಹಲವು ಆರ್ ಟಿಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ; ಶೋಧ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT