ನಗರ ಪೊಲೀಸ್ ಕಮೀಷನರ್ ದಯಾನಂದ್ 
ರಾಜ್ಯ

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರ್‌ನಲ್ಲಿ 67 ಜನರ ಬಂಧನ- ಪೊಲೀಸ್ ಕಮಿಷನರ್ ದಯಾನಂದ್

ಬಂಧಿತರಿಂದ 170 ಕೆಜಿ ಗಾಂಜಾ, 2 ಕೆಜಿ ಅಫೀಮು, 13 ಗ್ರಾಂ ಕೊಕೇನ್, 372 ಗ್ರಾಂ 'ಎಂಡಿಎಂಎ' ಮತ್ತು 998 'ಎಕ್ಸ್ಟಸಿ' ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಬೆಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ಕಳೆದ ತಿಂಗಳು ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿದ್ದ ಮೂವರು ವಿದೇಶಿಯರು ಸೇರಿದಂತೆ 67 ಮಂದಿಯನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ತಿಳಿಸಿದ್ದಾರೆ.

ನಗರದಲ್ಲಿ ಡ್ರಗ್ಸ್ ದಂಧೆ, ಮಾದಕ ದ್ರವ್ಯ ಸಾಗಣೆ ಅಥವಾ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಅಪರಾಧಿಗಳನ್ನು ಗುರುತಿಸಲು ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲು ನಗರದ ಪ್ರತಿಯೊಂದು ಭಾಗದಲ್ಲೂ ದಾಳಿ ನಡೆಸಲಾಗುವುದು ಎಂದು ಅವರು ಹೇಳಿದರು.

ಸೆಪ್ಟೆಂಬರ್‌ನಲ್ಲಿ, ನಗರ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ 40 ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, ಸುಮಾರು 67 ಜನರನ್ನು ಬಂಧಿಸಿದ್ದಾರೆ, ಅದರಲ್ಲಿ ಮೂವರು ವಿದೇಶಿಗರಿದ್ದಾರೆ. ಬಂಧಿತರಿಂದ 170 ಕೆಜಿ ಗಾಂಜಾ, 2 ಕೆಜಿ ಅಫೀಮು, 13 ಗ್ರಾಂ ಕೊಕೇನ್, 372 ಗ್ರಾಂ 'ಎಂಡಿಎಂಎ' ಮತ್ತು 998 'ಎಕ್ಸ್ಟಸಿ' ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಪ್ರತಿನಿತ್ಯ ನಗರದ ಪ್ರತಿಯೊಂದು ಭಾಗದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಗುರುತಿಸುವುದರ ಜೊತೆಗೆ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳುತ್ತೇವೆ. ಬೆಂಗಳೂರು ನಗರದಲ್ಲಿ ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿರುವ ವಿದೇಶಿಯರನ್ನೂ ಗಡಿಪಾರು ಮಾಡುತ್ತಿದ್ದೇವೆ. 2024ರಲ್ಲಿ ಬೆಂಗಳೂರಿನಲ್ಲಿ ಮಾದಕ ದ್ರವ್ಯ ದಂಧೆಗಾಗಿ ಸುಮಾರು 80 ವಿದೇಶಿಗರನ್ನು ಅವರ ದೇಶಗಳಿಗೆ ಗಡೀಪಾರು ಮಾಡಲಾಗಿದೆ ಎಂದು ಅವರು ಹೇಳಿದರು.

ಇತ್ತೀಚಿಗೆ ಹೆಚ್ ಎಸ್ ಆರ್ ಲೇಔಟ್ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾದ 28 ಕೆಜಿ ಗಾಂಜಾವನ್ನು ತಮಿಳುನಾಡಿನಿಂದ ಪೂರೈಕೆಯಾಗಿತ್ತು ಎಂಬುದು ತಿಳಿದುಬಂದಿದ್ದು, ತಮಿಳುನಾಡಿನ ಮುಖ್ಯ ಪೂರೈಕೆದಾರ ಯಾರು ಮತ್ತು ಅವರು ಹೇಗೆ ಸರಬರಾಜು ಮಾಡುತ್ತಿದ್ದಾರೆ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ದಯಾನಂದ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT