ಆರೋಪಿಯಿಂದ ವಶಕ್ಕೆ ಪಡೆದಿರುವ ಲ್ಯಾಪ್ ಟಾಪ್ ಗಳು. 
ರಾಜ್ಯ

ಬೆಂಗಳೂರು: ಕಾರಿನ ಗಾಜು ಒಡೆದು ಲ್ಯಾಪ್'ಟಾಪ್ ಕಳ್ಳತನ; ಖದೀಮನ ಬಂಧನ

ಆರೋಪಿಗಳಿಬ್ಬರೂ ಅಣ್ಣ-ತಮ್ಮಂದಿರಾಗಿದ್ದು, ವಾರಕ್ಕೊಮ್ಮೆ ನಗರಕ್ಕೆ ಬಂದು ಅರ್ಧಗಂಟೆಯಲ್ಲಿ ಕೆಲಸ ಮುಗಿಸಿ ಮತ್ತೆ ಸ್ಕೂಟಿಯಲ್ಲಿ ವಾಪಸ್‌ ಹೋಗುತ್ತಿದ್ದರು.

ಬೆಂಗಳೂರು: ಕಾರಿನ ಗಾಜು ಒಡೆದು ಲ್ಯಾಪ್'ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದು, 12 ಲಕ್ಷ ಮೌಲ್ಯದ 17 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಸೇಲಂ ಮೂಲದ 35 ವರ್ಷದ ಸದಾನಾಯ್ಡು ಬಂಧಿತ ಆರೋಪಿ. ಈತನ ಅಣ್ಣ ಗಂಗೇಶ್ ಗಾಗಿ ಹುಡುಕಾಟ ಮುಂದುವರೆದಿದೆ.

ಆರೋಪಿಗಳಿಬ್ಬರೂ ಅಣ್ಣ-ತಮ್ಮಂದಿರಾಗಿದ್ದು, ವಾರಕ್ಕೊಮ್ಮೆ ನಗರಕ್ಕೆ ಬಂದು ಅರ್ಧಗಂಟೆಯಲ್ಲಿ ಕೆಲಸ ಮುಗಿಸಿ ಮತ್ತೆ ಸ್ಕೂಟಿಯಲ್ಲಿ ವಾಪಸ್‌ ಹೋಗುತ್ತಿದ್ದರು. ಇಬ್ಬರೂ ನಗರದ ಜಯನಗರ, ಜೆಪಿ‌ ನಗರ, ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಕೈಚಳಕ ತೋರಿಸುತ್ತಿದ್ದರು.

ಆ.31ರಂದು ಜಯನಗರ 5ನೇ ಬ್ಲಾಕ್‌ನ ಹೊಟೇಲ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಲ್ಯಾಪ್‌ಟಾಪ್‌ ಕಳವು ಮಾಡಿದ್ದ ಆರೋಪಿಗಳ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಇದರಂತೆ ಪ್ರಕರಣದ ತನಿಖೆಯಂತೆ ಸೆ.12 ಆರೋಪಿ ಸದಾನಾಯ್ಡುನನ್ನು ಸೇಲಂನಲ್ಲಿ ಬಂಧಿಸಿ, ನಗರಕ್ಕೆ ಕರೆತಂದು 9 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದೀಗ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT