ಬಳ್ಳಾರಿ ಜೈಲಿನಲ್ಲಿ ದರ್ಶನ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ಅಕ್ಟೋಬರ್ 14ಕ್ಕೆ ತೀರ್ಪು

ಜಾಮೀನು ಕೋರಿ ಪ್ರಕರಣದ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯ, ಆರೋಪಿ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್​ಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರ ಮುಕ್ತಾಯಗೊಳಿಸಿದ್ದು, ಅಕ್ಟೋಬರ್ 14ಕ್ಕೆ ತೀರ್ಪು ಕಾಯ್ದಿರಿಸಿದೆ.

ಜಾಮೀನು ಕೋರಿ ಪ್ರಕರಣದ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯ, ಆರೋಪಿ ಪರ ವಕೀಲ ಸಿವಿ ನಾಗೇಶ್ ಹಾಗೂ ಎಸ್​ಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.

ಅಕ್ಟೋಬರ್ 14 ರಂದು ಎ2 ಆರೋಪಿ ದರ್ಶನ್​ಗೆ ಜಾಮೀನು ಸಿಗುತ್ತದೆಯೋ ಇಲ್ಲವೋ ಎಂಬುದು ತಿಳಿಯಲಿದೆ. ಅದೇ ದಿನ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ8 ರವಿಶಂಕರ್, ಎ11, ಎ12 ಹಾಗೂ ಎ13 ಅವರ ಜಾಮೀನು ಅರ್ಜಿಯ ಆದೇಶವೂ ಹೊರಬೀಳಲಿದೆ.

ಅಕ್ಟೋಬರ್ 14 ರಂದು ಎ13 ದೀಪಕ್​ಗೆ ಜಾಮೀನು ಸಿಗುವುದು ಖಾತ್ರಿಯಾಗಿದೆ. ಏಕೆಂದರೆ ದೀಪಕ್​ ಗೆ ಜಾಮೀನು ನೀಡಲು ಎಸ್​ಪಿಪಿ ತಕರಾರು ಎತ್ತಿಲ್ಲ. ಆದರೆ ಇನ್ನುಳಿದ ಯಾವುದೇ ಆರೋಪಿಗಳಿಗೆ ಜಾಮೀನು ನೀಡಬಾರದು ಪ್ರಸನ್ನ ಕುಮಾರ್ ವಾದಿಸಿದ್ದಾರೆ.

ಇಂದು ನಡೆದ ವಾದದಲ್ಲಿ ಸಿವಿ ನಾಗೇಶ್ ಅವರು, ಎಸ್​ಪಿಪಿ ಅವರು ಕಳೆದ ಎರಡು ದಿನಗಳಲ್ಲಿ ಸಲ್ಲಿಸಿದ ವಾದಕ್ಕೆ ಪ್ರತಿವಾದ ಮಂಡಿಸಿದರು. ನಾಗೇಶ್ ಅವರು, ಆರೋಪಿಗಳು ಮತ್ತು ಸಾಕ್ಷಿಗಳ ಲೊಕೇಶನ್ ಒಂದೇ ಕಡೆ ಇದ್ದವೆಂದು ಪೊಲೀಸರು ಮಾಡಿರುವ ತನಿಖೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಅದಾದ ಬಳಿಕ ಒಬ್ಬ ಸಾಕ್ಷಿಯ ಹೇಳಿಕೆಯನ್ನು 13 ದಿನ ತಡವಾಗಿ ದಾಖಲಿಸಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಆ ಸಾಕ್ಷಿಯನ್ನು ಪೊಲೀಸರೇ ಸೃಷ್ಟಿಸಿದ್ದಾರೆ. ಬೇಕೆಂದೆ ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಆ ವರದಿಗೆ ಹೋಲಿಕೆ ಆಗುವಂತೆ ಸಾಕ್ಷಿಯಿಂದ ಹೇಳಿಕೆ ಪಡೆಯಲಾಗಿದೆ ಎಂದು ವಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್