ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ 70 ಕೋಟಿ ರೂ. ವಂಚನೆ, ಐವರ ಬಂಧನ

ಶ್ರೀನಿವಾಸ್, ನಾಗರಾಜ್, ರವಿಕುಮಾರ್, ಭರತ್ ಮತ್ತು ಸ್ವಾಮಿ ಬಂಧಿತರು. ಐವರು ಆರೋಪಿಗಳ ಪೈಕಿ ನಾಗರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಉಳಿದ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು: ಕೆಂಗೇರಿ ಸಮೀಪದ ಚಲ್ಲಘಟ್ಟದಲ್ಲಿ ಆರು ಎಕರೆ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆ ಸೃಷ್ಟಿಸಿ 70 ಕೋಟಿ ರೂಪಾಯಿ ಪರಿಹಾರ ಪಡೆಯಲು ಯತ್ನಿಸಿದ ಐವರು ಆರೋಪಿಗಳನ್ನು ಶೇಷಾದ್ರಿಪುರಂ ಪೊಲೀಸರು ಐವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಶ್ರೀನಿವಾಸ್, ನಾಗರಾಜ್, ರವಿಕುಮಾರ್, ಭರತ್ ಮತ್ತು ಸ್ವಾಮಿ ಬಂಧಿತರು. ಐವರು ಆರೋಪಿಗಳ ಪೈಕಿ ನಾಗರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಉಳಿದ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡಿಸಿಪಿ (ಕೇಂದ್ರ) ಎಚ್‌ಟಿ ಶೇಖರ್ ತಿಳಿಸಿದ್ದಾರೆ.

ಬಿಡಿಎ ವಿಚಕ್ಷಣ ದಳದ ಡಿವೈಎಸ್ಪಿ ಮಲ್ಲೇಶ್​​ ಅವರು ನೀಡಿದ ದೂರಿನ ಮೇರೆಗೆ ಚಲ್ಲಘಟ್ಟ ನಿವಾಸಿ ಪುಟ್ಟಮ್ಮ, ಗಂಗಮ್ಮ, ನಾಗರಾಜ್​​, ಲಕ್ಷ್ಮಮ್ಮ, ಶ್ರೀನಿವಾಸ, ಸಂತೋಷ್​​, ರವಿಕುಮಾರ್​, ಭರತ್​​, ಸುನೀತ್​, ಆಶಾ, ಸ್ವಾಮಿ, ಉಮೇಶ್​​​, ಬಿಡಿಎ ಭೂಸ್ವಾಧೀನ ಅಧಿಕಾರಿ, ವಿಶೇಷ ತಹಶೀಲ್ದಾರ್​, ಕಂದಾಯ ಇಲಾಖೆ ಅಧಿಕಾರಿಗಳು, ಬಿಡಿಎ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶೇಷಾದ್ರಿಪುರ ಠಾಣೆ ಪೊಲೀಸರು ಎಫ್‌ಐಆರ್​ ದಾಖಲಿಸಿದ್ದು, ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ಬಳಿಕ ಕೆಲ ಅಧಿಕಾರಿಗಳು ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಆರೋಪಿಗಳಾದ ಪುಟ್ಟಮ್ಮ, ಗಂಗಮ್ಮ, ಲಕ್ಷ್ಮಮ್ಮ, ಆಶಾ ಮತ್ತು ಬಂಧಿತ ಐವರು ಇತರ ಖಾಸಗಿ ವ್ಯಕ್ತಿಗಳು ಕಾನೂನುಬದ್ಧ ಮಾಲೀಕರಲ್ಲದಿದ್ದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಿಹಾರ ಪಡೆಯಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ಚಲ್ಲಘಟ್ಟ ಸರ್ವೇ ನಂ 13 ಮತ್ತು ಹೊಸ ಸರ್ವೇ ನಂಬರ್​ 58ರಲ್ಲಿನ 6 ಎಕರೆ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಎಲ್ಲ ಆರೋಪಿಗಳು ಹಾಗೂ ಜಮೀನಿನ ಮೂಲ ಮಾಲೀಕ ಮೂಡ್ಲಪ್ಪ ಯಾವುದೇ ರೀತಿಯಲ್ಲಿ ಸಂಬಂಧಿಗಳಲ್ಲ. ಆದರೂ ಸಂಬಂಧಿಕರೆಂದು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಬಿಡಿಎಗೆ ಸಲ್ಲಿಸಿದ್ದಾರೆ. ಅಲ್ಲದೆ, ಈ ಆಸ್ತಿಯ ಮಾಲೀಕರುಗಳು ತಾವುಗಳೇ ಎಂದು ಹೇಳಿಕೊಂಡು 70 ಕೋಟಿ ರೂ. ಮೌಲ್ಯದ ಆಸ್ತಿಗೆ ಪರಿಹಾರ ಕೋರಿದ್ದಾರೆ.

ಆಸ್ತಿಯ ಮೂಲ ಮಾಲೀಕ ಮೂಡ್ಲಪ್ಪ ಅಲಿಯಾಸ್ ಮೂಡ್ಲಯ್ಯ 1976ರಲ್ಲಿ ನಿಧನರಾಗಿದ್ದು, 1992 ಆಸ್ತಿಯ ಪೋಡಿ ಆಗಿದೆ. 2019-2020ರಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಆರೋಪಿಗಳು ರಿಲೀಸ್ ಡೀಡ್ ಮಾಡಿಕೊಂಡಿದ್ದಾರೆ.

ಈ ಆಸ್ತಿಯು ಈಗಾಗಲೇ ರೆವೆನ್ಯೂ ನಿವೇಶನಗಳಾಗಿ ಮಾರ್ಪಾಡಾಗಿ ಆಶ್ರಯ ಯೋಜನೆಗೆ ಕಾಯ್ದಿರಿಸಿರುವ ಜಮೀನಾಗಿದ್ದರೂ ರವಿಪ್ರಕಾಶ್‌ ಮತ್ತು ಸುಧಾ ಅವರು ಭೂ ಪರಿಹಾರಕ್ಕೆ ಅರ್ಹವಾಗಿರುವ ಜಮೀನು ಎಂದು ಸುಳ್ಳು ನಕಾಶೆ ಸಿದ್ಧಪಡಿಸಿದ್ದರು.

ಆರೋಪಿಗಳು ಸಲ್ಲಿಸಿದ್ದ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ, ನಿಜವಾದ ಆಸ್ತಿ ಮಾಲೀಕರ ಬಗ್ಗೆ ವಿಚಾರ ಮಾಡಿರಲಿಲ್ಲ. ದಕ್ಷಿಣ ಉಪ ವಿಭಾಗಾಧಿಕಾರಿ ಡಾ.ಶಿವಣ್ಣ ಅವರು 2021ರಲ್ಲಿಆರೋಪಿ ಪುಟ್ಟಮ್ಮ ಹೆಸರಿಗೆ ಖಾತೆ ಮಾಡಲು ಬೆಂಗಳೂರು ದಕ್ಷಿಣ ತಾಲೂಕು ವಿಶೇಷ ತಹಶೀಲ್ದಾರ್‌ಗೆ ಆದೇಶ ಮಾಡಿ ವಂಚನೆ ಕೃತ್ಯದಲ್ಲಿ ಭಾಗಿಯಾಗಿದ್ದರು. ಈ ಸಂಬಂಧ ಗೋವಿಂದರಾಜು ಎಂಬುವವರು ಬಿಡಿಎಗೆ ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಪ್ರಾಥಮಿಕ ವಿಚಾರಣೆ ನಡೆಸಿದಾಗ ಹಾಗೂ ಬೆರಳಚ್ಚು ತಜ್ಞರಿಂದ ವರದಿ ಪರಿಶೀಲಿಸಿದಾಗ ಅಕ್ರಮ ಬಯಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT