ಪತ್ರಕರ್ತ ಗಣೇಶ್ 
ರಾಜ್ಯ

ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ

ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್‌ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸದ್ಯ ಟಿವಿ 5 ಚಾನಲ್ ನಲ್ಲಿ ಔಟ್ ಪುಟ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯವರಾಗಿದ್ದ ಗಣೇಶ್‌ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌ ಅವರ ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

SCROLL FOR NEXT