ನಾರಾಯಣ ಮೂರ್ತಿ 
ರಾಜ್ಯ

ಮೌಲ್ಯಾಧಾರಿತ ನಾಯಕತ್ವದಲ್ಲಿ ರತನ್ ಟಾಟಾ ನನಗೆ ಮಾದರಿ: ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ

ನೈತಿಕ ವಿಷಯಗಳಲ್ಲಿ ನನಗೆ ಕೆಲವು ಅಸ್ಪಷ್ಟತೆ ಮತ್ತು ಗೊಂದಲಗಳಿದ್ದಾಗಲೆಲ್ಲಾ ರತನ್ ಟಾಟಾ ಅವರು ನನಗೆ ಮಾದರಿಯಾಗಿದ್ದರು.

ಬೆಂಗಳೂರು: ಆತ್ಮೀಯ ಸ್ನೇಹಿತ, ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರನ್ನು ಕಳೆದುಕೊಂಡಿರುವುದು ‘ತುಂಬಾ ನೋವಾಗಿದೆ’ ಎಂದು ಐಟಿ ಉದ್ಯಮದ ಹಿರಿಯ ಮತ್ತು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಗುರುವಾರ ಹೇಳಿದ್ದಾರೆ.

ನೈತಿಕ ವಿಷಯಗಳಲ್ಲಿ ನನಗೆ ಕೆಲವು ಅಸ್ಪಷ್ಟತೆ ಮತ್ತು ಗೊಂದಲಗಳಿದ್ದಾಗಲೆಲ್ಲಾ ರತನ್ ಟಾಟಾ ಅವರು ನನಗೆ ಮಾದರಿಯಾಗಿದ್ದರು ಎಂದು 78 ವರ್ಷದ ನಾರಾಯಣ ಮೂರ್ತಿ ಹೇಳಿದ್ದಾರೆ.

2020 ರಲ್ಲಿ ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ನಾರಾಯಣ ಮೂರ್ತಿ ಅವರು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸುವ ಮೂಲಕ ಅವರ ಆಶೀರ್ವಾದ ಬಯಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾದರು. ಇಂದು ನಡೆಯಲಿರುವ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯಲ್ಲಿ ಅಮಿತ್ ಶಾ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT