ರಾಜ್ಯ

ಬೆಂಗಳೂರು: ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ! ಸಹೋದ್ಯೋಗಿ ಮಹಿಳೆಗೆ ಬೆದರಿಕೆ ಹಾಕಿದ ವ್ಯಕ್ತಿ, ಕೆಲಸದಿಂದ ವಜಾ

ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು.

ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಮಹಿಳಾ ಸಹೋದ್ಯೋಗಿಯ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ.ಪೊಲೀಸರು ಆರೋಪಿ ನಿಕಿತ್ ಶೆಟ್ಟಿ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ವಿಶೇಷವಾಗಿ ಕರ್ನಾಟಕದಲ್ಲಿ, ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಮೇಸೆಜ್ ಸ್ಕ್ರೀನ್ ಶಾಟ್ ನ್ನು ಹಂಚಿಕೊಂಡಿದ್ದರು.

ನನ್ನ ಹೆಂಡತಿಯ ಬಟ್ಟೆಯ ಆಯ್ಕೆಯನ್ನು ಪ್ರಶ್ನೆ ಮಾಡಿರುವ ಈ ವ್ಯಕ್ತಿ, ನನ್ನ ಹೆಂಡತಿಯ ಮುಖದ ಮೇಲೆ ಆಸಿಡ್ ಎರಚುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಈ ರೀತಿಯ ಯಾವುದೇ ಘಟನೆ ನಡೆಯದಂತೆ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಶಹಬಾಜ್ ಅನ್ಸಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದು. ಇದನ್ನು ಡಿಜಿಪಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಟ್ಯಾಗ್ ಕೂಡಾ ಮಾಡಿದ್ದಾರೆ.

ಈ ಸಂಸ್ಥೆಯಲ್ಲಿ (ಶೆಟ್ಟಿ ಕೆಲಸ ಮಾಡುತ್ತಿದ್ದ ಖಾಸಗಿ ಸಂಸ್ಥೆ) ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ನಾನು ಭಾವಿಸುತ್ತೇನೆ" ಎಂದು ಅವರು ಹೇಳಿದ್ದಾರೆ.

ನೆಟ್ಟಿಗರು ಈ ವಿಷಯವನ್ನು ಗಮನಕ್ಕೆ ತಂದ ನಂತರ ಶೆಟ್ಟಿ ಅವರನ್ನು ಕಂಪನಿಯಿಂದ ವಜಾಗೊಳಿಸಿದೆ. ನನ್ನ ಪತ್ನಿಗೆ ಆಸಿಡ್ ದಾಳಿಯ ಬೆದರಿಕೆ ಹಾಕಿದ ವ್ಯಕ್ತಿ ಕೆಲಸ ಕಳೆದುಕೊಂಡಿದ್ದಾನೆ. ಕಂಪನಿಯು ಕೂಡಲೇ ಕಾರ್ಯಪ್ರವೃತ್ತರಾಗಿ ಅವರನ್ನು ವಜಾಗೊಳಿಸಿದೆ. ಇದನ್ನು ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ಅನ್ಸಾರ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT