ರಾಜ್ಯ

ಬೆಂಗಳೂರು: ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ! ಸಹೋದ್ಯೋಗಿ ಮಹಿಳೆಗೆ ಬೆದರಿಕೆ ಹಾಕಿದ ವ್ಯಕ್ತಿ, ಕೆಲಸದಿಂದ ವಜಾ

ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು.

ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಮಹಿಳಾ ಸಹೋದ್ಯೋಗಿಯ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ.ಪೊಲೀಸರು ಆರೋಪಿ ನಿಕಿತ್ ಶೆಟ್ಟಿ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ವಿಶೇಷವಾಗಿ ಕರ್ನಾಟಕದಲ್ಲಿ, ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಮೇಸೆಜ್ ಸ್ಕ್ರೀನ್ ಶಾಟ್ ನ್ನು ಹಂಚಿಕೊಂಡಿದ್ದರು.

ನನ್ನ ಹೆಂಡತಿಯ ಬಟ್ಟೆಯ ಆಯ್ಕೆಯನ್ನು ಪ್ರಶ್ನೆ ಮಾಡಿರುವ ಈ ವ್ಯಕ್ತಿ, ನನ್ನ ಹೆಂಡತಿಯ ಮುಖದ ಮೇಲೆ ಆಸಿಡ್ ಎರಚುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಈ ರೀತಿಯ ಯಾವುದೇ ಘಟನೆ ನಡೆಯದಂತೆ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಶಹಬಾಜ್ ಅನ್ಸಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದು. ಇದನ್ನು ಡಿಜಿಪಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಟ್ಯಾಗ್ ಕೂಡಾ ಮಾಡಿದ್ದಾರೆ.

ಈ ಸಂಸ್ಥೆಯಲ್ಲಿ (ಶೆಟ್ಟಿ ಕೆಲಸ ಮಾಡುತ್ತಿದ್ದ ಖಾಸಗಿ ಸಂಸ್ಥೆ) ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ನಾನು ಭಾವಿಸುತ್ತೇನೆ" ಎಂದು ಅವರು ಹೇಳಿದ್ದಾರೆ.

ನೆಟ್ಟಿಗರು ಈ ವಿಷಯವನ್ನು ಗಮನಕ್ಕೆ ತಂದ ನಂತರ ಶೆಟ್ಟಿ ಅವರನ್ನು ಕಂಪನಿಯಿಂದ ವಜಾಗೊಳಿಸಿದೆ. ನನ್ನ ಪತ್ನಿಗೆ ಆಸಿಡ್ ದಾಳಿಯ ಬೆದರಿಕೆ ಹಾಕಿದ ವ್ಯಕ್ತಿ ಕೆಲಸ ಕಳೆದುಕೊಂಡಿದ್ದಾನೆ. ಕಂಪನಿಯು ಕೂಡಲೇ ಕಾರ್ಯಪ್ರವೃತ್ತರಾಗಿ ಅವರನ್ನು ವಜಾಗೊಳಿಸಿದೆ. ಇದನ್ನು ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ಅನ್ಸಾರ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT