ರಾಜ್ಯ

ಬೆಂಗಳೂರು: ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ! ಸಹೋದ್ಯೋಗಿ ಮಹಿಳೆಗೆ ಬೆದರಿಕೆ ಹಾಕಿದ ವ್ಯಕ್ತಿ, ಕೆಲಸದಿಂದ ವಜಾ

ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು.

ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಮಹಿಳಾ ಸಹೋದ್ಯೋಗಿಯ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ.ಪೊಲೀಸರು ಆರೋಪಿ ನಿಕಿತ್ ಶೆಟ್ಟಿ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ವಿಶೇಷವಾಗಿ ಕರ್ನಾಟಕದಲ್ಲಿ, ನಿಮ್ಮ ಹೆಂಡತಿಗೆ ಒಳ್ಳೆಯ ಡ್ರೆಸ್ ಧರಿಸಲು ಹೇಳಿ, ಇಲ್ಲದಿದ್ದರೆ ಆಕೆಯ ಮುಖದ ಮೇಲೆ ಆಸಿಡ್ ಎರಚಬೇಕಾಗುತ್ತದೆ ಎಂದು ಶೆಟ್ಟಿ ಅವರು ಅಕ್ಟೋಬರ್ 9 ರಂದು ಅನ್ಸಾರ್‌ಗೆ ಮೇಸೆಜ್ ಕಳುಹಿಸಿದ್ದರು. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಮೇಸೆಜ್ ಸ್ಕ್ರೀನ್ ಶಾಟ್ ನ್ನು ಹಂಚಿಕೊಂಡಿದ್ದರು.

ನನ್ನ ಹೆಂಡತಿಯ ಬಟ್ಟೆಯ ಆಯ್ಕೆಯನ್ನು ಪ್ರಶ್ನೆ ಮಾಡಿರುವ ಈ ವ್ಯಕ್ತಿ, ನನ್ನ ಹೆಂಡತಿಯ ಮುಖದ ಮೇಲೆ ಆಸಿಡ್ ಎರಚುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಈ ರೀತಿಯ ಯಾವುದೇ ಘಟನೆ ನಡೆಯದಂತೆ ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಶಹಬಾಜ್ ಅನ್ಸಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದು. ಇದನ್ನು ಡಿಜಿಪಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗೆ ಟ್ಯಾಗ್ ಕೂಡಾ ಮಾಡಿದ್ದಾರೆ.

ಈ ಸಂಸ್ಥೆಯಲ್ಲಿ (ಶೆಟ್ಟಿ ಕೆಲಸ ಮಾಡುತ್ತಿದ್ದ ಖಾಸಗಿ ಸಂಸ್ಥೆ) ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ನಾನು ಭಾವಿಸುತ್ತೇನೆ" ಎಂದು ಅವರು ಹೇಳಿದ್ದಾರೆ.

ನೆಟ್ಟಿಗರು ಈ ವಿಷಯವನ್ನು ಗಮನಕ್ಕೆ ತಂದ ನಂತರ ಶೆಟ್ಟಿ ಅವರನ್ನು ಕಂಪನಿಯಿಂದ ವಜಾಗೊಳಿಸಿದೆ. ನನ್ನ ಪತ್ನಿಗೆ ಆಸಿಡ್ ದಾಳಿಯ ಬೆದರಿಕೆ ಹಾಕಿದ ವ್ಯಕ್ತಿ ಕೆಲಸ ಕಳೆದುಕೊಂಡಿದ್ದಾನೆ. ಕಂಪನಿಯು ಕೂಡಲೇ ಕಾರ್ಯಪ್ರವೃತ್ತರಾಗಿ ಅವರನ್ನು ವಜಾಗೊಳಿಸಿದೆ. ಇದನ್ನು ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ಅನ್ಸಾರ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT