ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಕಳಸಾ ಬಂಡೂರಿ ಯೋಜನೆಯಿಂದ ಎಲ್ಲ ಅಡೆತಡೆಗಳು ನಿವಾರಣೆ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ

ಅ.9 ರಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ನಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ.

ಬೆಂಗಳೂರು: ಕಳಸಾ ಬಂಡೂರಿ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.9 ರಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ನಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದು ತಿಳಿಸಿರುವುದಾಗಿ ಹೇಳಿದರು.

ಮಹದಾಯಿ ನದಿಯ ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರಕಾರ ತಕರಾರು ಮಾಡುತ್ತದೆ. ಆದರೆ, 2018ರ ಆ.14ರಂದು ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಆದರೆ, ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ. ಅಲ್ಲದೆ, ಕೇಂದ್ರೀಯ ಜಲ ಆಯೋಗ 2022ರ ಡಿ.29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಿನ ಯೋಜನೆಗಳ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪುಗಳನ್ನೂ ಉಲ್ಲೇಖಿಸಿದ್ದು, ನಿನ್ನೆಯ ಸಭೆಯಲ್ಲಿ ಫಲಪ್ರದವಾದ ಮತ್ತು ಸಕಾರಾತ್ಮಕವಾದ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಮುಂದಿನ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ. ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಮಂಡಳಿಗೆ ವಿವರವಾದ ಪತ್ರ ಬರೆಯಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT