ಬಂಧನ (ಸಾಂಕೇತಿಕ ಚಿತ್ರ) 
ರಾಜ್ಯ

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ

ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ ರುಪಾಯಿ ಮುಖಬೆಲೆಯ ನಕಲಿ ನೋಟುಗಳು ಹಾಗೂ 2 ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ.

ಬೆಂಗಳೂರು: 2000 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಎ.ಕೆ.ಅಫೈಲ್ ಹುಸೇನ್ (29), ಪ್ರಸೀತ್ (47), ಮೊಹಮ್ಮದ್ ಆಫ್ಘಾಸ್ (34), ನೂರುದ್ದೀನ್ ಅಲಿಯಾಸ್ ಅನ್ವರ್ (34) ಹಾಗೂ ಪ್ರಿಯೇಶ್ (34) ಎಂದು ಗುರ್ತಿಸಲಾಗಿದೆ.

ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ ರುಪಾಯಿ ಮುಖಬೆಲೆಯ ನಕಲಿ ನೋಟುಗಳು ಹಾಗೂ 2 ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ.

ಸೆಪ್ಟೆಂಬರ್ 9 ರಂದು ಬಳ್ಳಾರಿಯ ಸಿರುಗುಪ್ಪದ ಅಫ್ಜಲ್ ಹುಸೇನ್ (29) ಬೆಂಗಳೂರಿನ ಆರ್‌ಬಿಐನ ಪ್ರಾದೇಶಿಕ ಕಚೇರಿಗೆ 2,000 ರೂ.ಗಳ 1,234 ನೋಟುಗಳೊಂದಿಗೆ ಭೇಟಿ ನೀಡಿದ್ದು, 24.68 ಲಕ್ಷ ರೂ.ಗಳ ಮೊತ್ತವನ್ನು 500 ರೂ ನೋಟುಗಳಿಗೆ ಬದಲಾಯಿಸಲು ಮುಂದಾಗಿದ್ದರು. ಈ ವೇಳೆ ನೋಟುಗಳ ಪರಿಶೀಲಿಸಿದ ಬ್ಯಾಂಕ್ ಅಧಿಕಾರಿಗಳಿಗೆ ನಕಲಿ ನೋಟುಗಳು ಎಂಬುದು ತಿಳಿದುಬಂದಿದೆ ಕೂಡಲೇ ಅಫ್ಜಲ್ ನನ್ನು ಮುಂದಿನ ತನಿಖೆಗಾಗಿ ನಕಲಿ ನೋಟುಗಳ ಸಮೇತ ಹಲಸೂರು ಗೇಟ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲಸೂರು ಗೇಟ್ ಪೊಲೀಸರು ನಕಲಿ ನೋಟುಗಳ ಬಳಕೆ (ಬಿಎನ್‌ಎಸ್ 179) ಮತ್ತು ನಕಲಿ ನೋಟುಗಳನ್ನು ಹೊಂದಿರುವ (ಬಿಎನ್‌ಎಸ್ 180) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT