ಸಚಿವ ಸಂಪುಟ ಸಭೆ  
ರಾಜ್ಯ

ಬಿಜೆಪಿ ವಿರುದ್ಧ ಕೋವಿಡ್ ಹಗರಣ ಅಸ್ತ್ರ: ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ

ಕೋವಿಡ್ ಹಗರಣದ (Covid Scam) ತನಿಖೆಗೆ ಎಸ್‌ಐಟಿ ರಚಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಈ ಮೂಲಕ 7,223.64 ಕೋಟಿ ಅಕ್ರಮ ಆರೋಪದ ತನಿಖೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದು ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಮುನ್ನುಡಿ ಬರೆದಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮುಡಾಸ್ತ್ರ ಪ್ರಯೋಗಿಸಿದ್ದ ಬಿಜೆಪಿ ವಿರುದ್ಧ ಕಾಂಗ್ರೆಸ್ ಸಮರ ಸಾರಿದೆ. ಬಿಜೆಪಿ ಅವಧಿಯಲ್ಲಿನ ಕೋವಿಡ್ ಅಕ್ರಮ ಆರೋಪಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ.

ಕೋವಿಡ್ ಹಗರಣದ (Covid Scam) ತನಿಖೆಗೆ ಎಸ್‌ಐಟಿ ರಚಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಈ ಮೂಲಕ 7,223.64 ಕೋಟಿ ಅಕ್ರಮ ಆರೋಪದ ತನಿಖೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದು ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಮುನ್ನುಡಿ ಬರೆದಿದೆ.

ಕೋವಿಡ್ ಹಗರಣದ ತನಿಖೆ ನಡೆಸಿದ್ದ ಕುನ್ಹಾ ಆಯೋಗದ ಮಧ್ಯಂತರ ವರದಿಯ ಮೇಲೆ ಕ್ರಮ ಕೈಗೊಳ್ಳಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಈ ಮೂಲಕ ಮುಡಾ ಹಗರಣ ಪ್ರಸ್ತಾಪ ಮಾಡುತ್ತಿರೋ ಬಿಜೆಪಿಗೆ ಕೋವಿಡ್ ಹಗರಣದ ಟಕ್ಕರ್ ಕೊಡುತ್ತಾ ಸರ್ಕಾರ ಎಂಬುದನ್ನು ಕಾದುನೋಡಬೇಕಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದು, ಕೋವಿಡ್ - 19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ಅವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿ ನೀಡಿದೆ.

ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ನಡೆದ ಚರ್ಚೆಗಳು

* ಜಸ್ಟೀಸ್ ಕುನ್ನಾ ಆಯೋಗದ ವರದಿ ಜಾರಿ ಆಗಲೇಬೇಕು

* ವರದಿ ಪ್ರಕಾರ 7223.64 ಕೋಟಿಯ ಅಕ್ರಮ ನಡೆದಿದೆ

* 500 ಕೋಟಿಯನ್ನ ಕಂಪನಿಗಳಿಂದ ವಸೂಲಿ ಮಾಡಬೇಕು

* ಅಕ್ರಮದ ಪಾಲುದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ತೀರ್ಮಾನ

* ಉಪ್ಪು ತಿಂದವರು ನೀರು ಕುಡಿಯುತ್ತಾರೆ.. ಅನುಭವಿಸಲಿ

* ಮಧ್ಯಂತರ ವರದಿ ಶಿಫಾರಸು ಅನ್ವಯ ಎಸ್‌ಐಟಿ ತನಿಖೆ

* ಕೋವಿಡ್ ಅಕ್ರಮದ ತನಿಖೆ ನಡೆಸಲು ಎಸ್‌ಐಟಿ ರಚನೆ

* ಸಂಪುಟ ಉಪಸಮಿತಿ ಮೂಲಕವೂ ತನಿಖೆ, ವಿಚಾರಣೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT