ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಹೈಕಮಾಂಡ್ ಭೇಟಿಗೆ ನಿರ್ಧಾರ

ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಬೆಂಗಳೂರು: ಪರಿಶಿಷ್ಟ ಜಾತಿಗೆ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆಸಿದ್ದು, ಸಭೆಯಲ್ಲಿ ಹೈಕಮಾಂಡ್ ಭೇಟಿಗೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಎಸ್‌ಸಿ ವರ್ಗದ ಎಲ್ಲಾ ಸಮುದಾಯಗಳ ಹಿತಾಸಕ್ತಿಗಳನ್ನು ಪರಿಗಣಿಸಬೇಕಾಗಿರುವುದರಿಂದ ವಿಷಯ ಸೂಕ್ಷ್ಮವಾಗಿದೆ. ಈ ಮೀಸಲಾತಿಯು ಸಮುದಾಯಕ್ಕೆ ಸಹಾಯ ಮಾಡುತ್ತದೆ ಎಂದು ಮನವರಿಕೆ ಮಾಡುವುದು ಅಗತ್ಯವಿದೆ ಎಂದು ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 21 ರಂದು ಎಸ್‌ಸಿ ವರ್ಗದ ವಿವಿಧ ಸಮುದಾಯಗಳಿಗೆ ಸೇರಿದ ಕಾಂಗ್ರೆಸ್ ಶಾಸಕರು ಸಭೆ ನಡೆಸಿ, ಒಳಮೀಸಲಾತಿ ಕುರಿತು ಅಂತಿಮ ನಿರ್ಧಾರಕ್ಕೆ ಬರಲಿದ್ದು, ಬಳಿಕ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT