ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ವಾಮಾಮಾರ್ಗ, ಮೋಸವನ್ನು ಸ್ಥಿರಗೊಳಿಸಲು ಹೊರಟಿರುವ ಸರ್ಕಾರವಿದು: ಕಾಂಗ್ರೆಸ್ ವಿರುದ್ಧ HDK ವಾಗ್ದಾಳಿ

ಮಹರ್ಷಿ ವಾಲ್ಮೀಕಿ ನಿಗಮದಿಂದ ಬಡವರಿಗೆ ಕೊಡಬೇಕಾದ ಹಣವನ್ನು ನುಂಗಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿ ಮುಡಾ ನಿವೇಶನ ತೆಗೆದುಕೊಂಡಿದ್ದಾರೆ. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ ಕೊಟ್ಟಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ.

ಮೈಸೂರು: ಕಾಂಗ್ರೆಸ್‌ನವರು ಇಂದು ಪೇಪರ್‌ಗಳಲ್ಲಿ ಅದ್ಯಾವುದೋ ಜಾಹೀರಾತು ಕೊಟ್ಟಿದ್ದಾರೆ. ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ! ಕರ್ನಾಟಕ ರಾಜ್ಯವನ್ನು ವಾಮಾಮಾರ್ಗ, ಮೋಸದಿಂದ ಅಸ್ಥಿರಗೊಳಿಸುತ್ತಿದ್ದಾರೆ ಎಂದು ಜಾಹೀರಾತು ಕೊಟ್ಟಿದ್ದಾರೆ. ಆದರೆ, ವಾಮಾಮಾರ್ಗ, ಮೋಸವನ್ನು ಸ್ಥಿರಗೊಳಿಸಲು ಹೊರಟಿರುವ ಸರ್ಕಾರವಿದು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದ ಅವರು, ಇವರು ಯಾವತ್ತು ಸತ್ಯ ಹಾಗೂ ಧರ್ಮವನ್ನು ಉಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಹರ್ಷಿ ವಾಲ್ಮೀಕಿ ನಿಗಮದಿಂದ ಬಡವರಿಗೆ ಕೊಡಬೇಕಾದ ಹಣವನ್ನು ನುಂಗಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿ ಮುಡಾ ನಿವೇಶನ ತೆಗೆದುಕೊಂಡಿದ್ದಾರೆ. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ ಕೊಟ್ಟಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ. ಇವರೇ ಆರ್ಥಿಕ ಸಚಿವರು, ಇವರ ಇಲಾಖೆಗೆ ಸಂಬಂಧಪಟ್ಟ ಹಣ ಬಿಡುಗಡೆ ಆಗಿದೆ. ಅದರ ಸತ್ಯಾಂಶಗಳು ಹೊರಬರುವ ಕಾಲ ದೂರವಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ಸಿದ್ರಾಮಣ್ಣನ ಬಗ್ಗೆ ಹಿನಕಲ್ ಸಾಕಮ್ಮನ ಕೇಳಿದರೆ ಗೊತ್ತಾಗುತ್ತದೆ. ಯಾವ ವಾಮ ಮಾರ್ಗದಲ್ಲಿ ನಿವೇಶನ ಪಡೆದಿದ್ದಾರೆ ಎಂಬುದು ಗೊತ್ತಾಗುತ್ತದೆ. ಇದೆಲ್ಲ ಇತಿಹಾಸ ಇದೆ ಎಂದರು. ಹಾಗಾಗಿ ಇಲ್ಲಿ ಸ್ಥಿರಗೊಳಿಸುವುದು, ಅಸ್ಥಿರಗೊಳಿಸೊದು ನಮ್ಮ ಕೈಯಲ್ಲಿಲ್ಲ. ಎಲ್ಲ ಚಾಮುಂಡೇಶ್ವರಿ ಅಮ್ಮನ ಕೈಯಲ್ಲಿದೆ ಎಂದು ಹೇಳಿದರು.

ಎಚ್‌ಡಿಕೆ ಕೇವಲ ಆರೋಪ ಮಾಡದೇ ದಾಖಲೆ ನೀಡಲಿ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಎಷ್ಟು ದಾಖಲೆ ಕೊಡಲಿ? ಈಗ ಕೊಟ್ಟಿರುವುದನ್ನೇ ಅವರಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್ ಮುಖಂಡರೇ ಅ ಬಗ್ಗೆ ಮಾತಾಡುತ್ತಾರೆ ಎಂದರು.

ನಾನು ಮಾಧ್ಯಮದವರ ಎದುರು ತೋರಿಸಿದ್ದ ಪೆನ್‌ಡ್ರೈವ್‌ನಲ್ಲಿ ವರ್ಗಾವಣೆ ದಂಧೆ ಬಗ್ಗೆ ಇತ್ತೇ ‌ಹೊರತು ಅಶ್ಲೀಲ ಚಿತ್ರ ಇರಲಿಲ್ಲ. ನಾನು ಕಮಿಷನ್ ಮಾಡಬೇಕು ಅಂತಿದ್ರೆ ರೈತರ ಸಾಲ ಮನ್ನಾ ಮಾಡಬೇಕಾಗಿರಲಿಲ್ಲ. ನಾನು ಎರಡು ಬಾರಿ ಮುಖ್ಯಮಂತ್ರಿಯಾದಾಗಲೂ ಯಾರಿಗೂ ಒತ್ತಡ ಹಾಕಿ ಕಮಿಷನ್ ಪಡೆದಿಲ್ಲ. ಇದನ್ನೆಲ್ಲಾ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹೇಳುತ್ತಿದ್ದೇನೆ. ಕಮಿಷನ್ ಪಡೆದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT