ಶಾಸಕ ರಾಜು ಕಾಗೆ 
ರಾಜ್ಯ

ಬೆಳಗಾವಿ: ರೈತರಿಗಾಗಿ ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ, ಸ್ವಪಕ್ಷದ ವಿರುದ್ಧವೇ ಹರಿಹಾಯ್ದ ಕಾಂಗ್ರೆಸ್ ಶಾಸಕ!

ರೈತರಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ, ಇದನ್ನು ನೀವು ಅರ್ಥಮಾಡಿಕೊಳ್ಳಬೇಕು. ನಾನು ನಿಮಗೆ ಸುಳ್ಳು ಹೇಳಿ ನಾಟಕ ಮಾಡಬೇಕೇ? ಅಕ್ಕಿ ಮತ್ತು ಇತರ ಬೆಳೆಗಳು ಬೆಳೆಯದಿದ್ದರೆ ದೇಶ ಏನು ತಿನ್ನುತ್ತದೆ? ನಾವು ನೋಟುಗಳನ್ನು ತಿನ್ನಬೇಕೇ?

ಬೆಳಗಾವಿ: ರಾಜ್ಯ ಸರ್ಕಾರ ರೈತರಿಗಾಗಿ ಏನನ್ನೂ ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಸ್ವಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ಕಳೆದ ಒಂದು ವರ್ಷದಿಂದ ಇದನ್ನು ಅವರು ಹೇಳುತ್ತಾ ಬಂದಿದ್ದಾರೆ. ರಾಜ್ಯದಲ್ಲಿ ರೈತರ ಉಳಿವಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಆರೋಪಿಸಿರುವ ಅವರು, ರೈತರ ಸಮಸ್ಯೆಗಳಿಗಾಗಿ ಬೆಂಗಳೂರಿನಲ್ಲಿರುವ ವಿಧಾನಸೌಧದಲ್ಲಿ ತಮ್ಮ ಜೀವ ಕಳೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಕಾಗವಾಡ ಕ್ಷೇತ್ರದ ತವಾಸಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜು ಕಾಗೆ, ರೈತರಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ, ಇದನ್ನು ನೀವು ಅರ್ಥಮಾಡಿಕೊಳ್ಳಬೇಕು. ನಾನು ನಿಮಗೆ ಸುಳ್ಳು ಹೇಳಿ ನಾಟಕ ಮಾಡಬೇಕೇ? ಅಕ್ಕಿ ಮತ್ತು ಇತರ ಬೆಳೆಗಳು ಬೆಳೆಯದಿದ್ದರೆ ದೇಶ ಏನು ತಿನ್ನುತ್ತದೆ? ನಾವು ನೋಟುಗಳನ್ನು ತಿನ್ನಬೇಕೇ? ಎಂದು ಪ್ರಶ್ನಿಸಿದ ಅವರು, ಮೊದಲು ರೈತರು ಬದುಕಲು ಸಹಾಯ ಮಾಡಿ ಎಂದರು.

ರೈತರು ಬದುಕಿದಾಗ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ಹೇಳಿದ ಶಾಸಕರು, ಕಳೆದ ಒಂದು ವರ್ಷದಿಂದ ಇದೇ ತಮ್ಮ ಕೂಗಾಗಿದೆ. ರೈತರ ಕಾರಣಕ್ಕಾಗಿ ವಿಧಾನಸೌಧದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕೂಡ ಹೇಳಿದ್ದೆ. ನಿಮ್ಮ ಕೆಲಸ ಮಾಡಲು ಸಿದ್ಧರಾಗಿರುವಾಗ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತೀರಿ ಎಂದು ಸಚಿವರು ನನಗೆ ಹೇಳಿದ್ದರು ಎಂದು ಅವರು ತಿಳಿಸಿದರು.

ಸರ್ಕಾರದ ಮಟ್ಟದಲ್ಲಿ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರೂ ಆಡಳಿತ ಸ್ಪಂದಿಸುತ್ತಿಲ್ಲ ಎಂದು ಸುಮ್ಮನೆ ಕುಳಿತಿಲ್ಲ. ನಾನು ರಾಜೀನಾಮೆ ನೀಡಬೇಕೇ? ಸರ್ಕಾರಕ್ಕೆ ಏಕೆ ಏನೂ ಮಾಡಲು ಸಾಧ್ಯವಾಗುತ್ತಿಲ್ಲ? ನಾವೇಕೆ ಅಧಿಕಾರದಲ್ಲಿ ಇರಬೇಕು? ಆಡಳಿತ ಪಕ್ಷದ ಶಾಸಕ ನಾಗಿರುವ ನಾನು ನನ್ನ ಅಸಾಮರ್ಥ್ಯವನ್ನು ವ್ಯಕ್ತಪಡಿಸುತ್ತಿದ್ದರೆ, ಈ ವ್ಯವಸ್ಥೆಯಲ್ಲಿ ನಾವು ಹೇಗೆ ಬದುಕುತ್ತಿದ್ದೇವೆ ಎಂಬುದನ್ನು ಊಹಿಸಬಹುದು. ತನಗೆ ತುಂಬಾ ನೋವಾಗಿದೆ ಮತ್ತು ಭವಿಷ್ಯದಲ್ಲಿ ಶಾಸಕನಾಗುವ ಆಸೆಯಿಲ್ಲ, ಆದರೆ ತನ್ನ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದ್ಧತೆಯನ್ನು ಹೊಂದಿದ್ದೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT