ಡಿ ಕೆ ಶಿವಕುಮಾರ್  
ರಾಜ್ಯ

ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ನೀತಿ ಖಂಡಿಸಿ ಪ್ರತಿಭಟನೆ: ಡಿ ಕೆ ಶಿವಕುಮಾರ್

ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತ‌ಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ ಎಂದು ಕೇಳಿದರು.

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತಾರತಮ್ಯವಾಗಿದೆ. ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕ್ಕೆ ತಾರತಮ್ಯವಾಗುತ್ತಿದೆ. ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತ‌ಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ ಎಂದು ಕೇಳಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ಐವರು ಸಚಿವರು ನಮ್ಮ ರಾಜ್ಯದಿಂದ ಇದ್ದಾರೆ. ನಮ್ಮಲ್ಲೇ ಇದ್ದುಕೊಂಡು ಈಗ ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಜಾಹೀರಾತು ವಿವಾದ: ರಾಜ್ಯ ಸರ್ಕಾರದ ಜಾಹೀರಾತಿಗೆ ವಿಪಕ್ಷಗಳು ಆಕ್ಷೇಪ ಎತ್ತಿರುವ ವಿಚಾರವಾಗಿ ಮಾತನಾಡಿದ ಅವರು, ನಮಗಿರುವ ಮಾಹಿತಿಯನ್ನು ಜಾಹಿರಾತು ರೂಪದಲ್ಲಿ ನೀಡಿದ್ದೇವೆ. ನಾವು ಮುನ್ನಡೆಯುತ್ತಿರುವ ದಾರಿಯ ಆಧಾರದ ಮೇಲೆ ಮತ್ತು ನಮ್ಮ ಭಾವನೆಗಳ ಮೇಲೆ ಜಾಹೀರಾತು ನೀಡಿದ್ದೇವೆ. ನಮ್ಮ ಸರ್ಕಾರದ ಸಾಧನೆ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡುತ್ತೇವೆ ಎಂದರು.

5 ನೇ ಹಂತದ ಕುಡಿಯುವ ಯೋಜನೆಗೆ ಚಾಲನೆ: ಈ ವರ್ಷ ದಸರಾ ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಮಳೆ-ಬೆಳೆ ಕೊಟ್ಟಿದ್ದಾಳೆ. ತಮಿಳುನಾಡಿನ ಹೋರಾಟ ಕಡಿಮೆಯಾಗಿದೆ. ಎಲ್ಲಾ ಅಣೆಕಟ್ಟೆಗಳು ತುಂಬಿವೆ. ಕಟ್​​ ಆಗಿದ್ದ ತುಂಗಭದ್ರಾ ಡ್ಯಾಂನ ಗೇಟ್​ ನ್ನು ಆರು ದಿನದಲ್ಲೇ ಕೂರಿಸಿ ನೀರು ಪೋಲಾಗುತ್ತಿದ್ದದ್ದನ್ನು ನಿಲ್ಲಿಸಿದ್ದೇವೆ. ಅ.16 ಬೆಂಗಳೂರಿಗೆ ವಿಶೇಷ ದಿನವಾಗಿದೆ. ಐದನೇ ಹಂತದ ಕುಡಿಯುವ ಯೋಜನೆ ಚಾಲನೆ ಸಿಗಲಿದೆ. ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

SCROLL FOR NEXT