ಸಿಎಂ ಸಿದ್ದರಾಮಯ್ಯ 
ರಾಜ್ಯ

ಕರ್ನಾಟಕದ ಹಣವನ್ನು ಭ್ರಷ್ಟ, ದುರಾಡಳಿತದ ರಾಜ್ಯಗಳಿಗೆ ಪುರಸ್ಕರಿಸಲು ಬಳಕೆ: ಸಿಎಂ ಸಿದ್ದರಾಮಯ್ಯ

28 ರಾಜ್ಯಗಳಿಗೆ ಬಿಡುಗಡೆ ಮಾಡಿರುವ ರೂ. 1,78,193 ಕೋಟಿಯಲ್ಲಿ ಕರ್ನಾಟಕ್ಕೆ ನೀಡಿರುವುದು ಕೇವಲ ರೂ. 6,498 ಕೋಟಿ ಮಾತ್ರ.

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದು, ಒಕ್ಕೂಟ ರಚನೆಯನ್ನು ಗೌರವಿಸುವ ಜೊತೆಗೆ ಕರ್ನಾಟಕವು ತನ್ನ ನ್ಯಾಯಯುತ ಪಾಲನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದರ ಕುರಿತು ಸಾರ್ವಜನಿಕ ಚರ್ಚೆಯನ್ನು ಪ್ರಾರಂಭಿಸಬೇಕು ಎಂದು ಕರೆ ನೀಡಿದರು.

ತೆರಿಗೆ ಪಾಲಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಲಾಗಿದೆ. 28 ರಾಜ್ಯಗಳಿಗೆ ಬಿಡುಗಡೆ ಮಾಡಿರುವ ರೂ. 1,78,193 ಕೋಟಿಯಲ್ಲಿ ಕರ್ನಾಟಕ್ಕೆ ನೀಡಿರುವುದು ಕೇವಲ ರೂ. 6,498 ಕೋಟಿ ಮಾತ್ರ. ಈ ಘೋರ ಅನ್ಯಾಯದ ವಿರುದ್ಧ ಜಾತಿ, ಧರ್ಮ ಅಥವಾ ರಾಜಕೀಯ ಸಂಬಂಧವನ್ನು ಲೆಕ್ಕಿಸದೆ ಪ್ರತಿಯೊಬ್ಬ ಕನ್ನಡಿಗನೂ ತಾರತಮ್ಯದ ವಿರುದ್ಧ ಧ್ವನಿ ಎತ್ತಲು ಪ್ರತಿಜ್ಞೆ ಮಾಡಬೇಕು ಎಂದಿದ್ದಾರೆ.

ದುರಾಡಳಿತ ಮತ್ತು ಭ್ರಷ್ಟಾಚಾರ ಪೀಡಿತ ರಾಜ್ಯಗಳನ್ನು ಪುರಸ್ಕರಿಸಲು ಕರ್ನಾಟಕದ ಶ್ರಮದಾನವನ್ನು ಏಕೆ ಬಳಸಲಾಗುತ್ತಿದೆ ಎಂದು ಪ್ರತಿಯೊಬ್ಬ ಕನ್ನಡಿಗ ಕೇಂದ್ರವನ್ನು ಕೇಳಬೇಕು. ದುರಾಡಳಿತದಿಂದ ಹಿಂದುಳಿದಿರುವ ರಾಜ್ಯಗಳ ಬೆಳವಣಿಗೆಗೆ ಕರ್ನಾಟಕದ ಬೆವರು ಮತ್ತು ಶ್ರಮ ಏಕೆ ತುಂಬಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಷ್ಟ್ರದ ತೆರಿಗೆ ಆದಾಯಕ್ಕೆ ಗಣನೀಯ ಕೊಡುಗೆ ನೀಡಿದರೂ, ಕರ್ನಾಟಕ ಶೇ. 3.64 ರಷ್ಟು ಮಾತ್ರ ತೆರಿಗೆ ಪಾಲು ಪಡೆಯುತ್ತದೆ. ಉತ್ತರ ಪ್ರದೇಶಕ್ಕೆ ಶೇ.17.93, ಬಿಹಾರಕ್ಕೆ ಶೇ. 10.05, ಮಧ್ಯಪ್ರದೇಶಕ್ಕೆ ಶೇ. 7.85 ಮತ್ತು ರಾಜಸ್ಥಾನಕ್ಕೆ ಶೇ. 6.02 ರಷ್ಟು ಕಡಿಮೆಯಾಗಿದೆ ಎಂದು ಹೇಳಿದ ಮುಖ್ಯಮಂತ್ರಿ,ಈ ಘೋರ ಅನ್ಯಾಯವನ್ನು ನಾವು ಎಷ್ಟು ದಿನ ಸಹಿಸಿಕೊಳ್ಳಬೇಕು?" ಎಂದು ಪ್ರಶ್ನಿಸಿದರು.

ಭಾರತದ ಒಕ್ಕೂಟ ರಚನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಕಾರವನ್ನು ಅವಲಂಬಿಸಿದೆ. ಆದಾಗ್ಯೂ, ಕರ್ನಾಟಕ ಮತ್ತು ಇತರ ದಕ್ಷಿಣದ ರಾಜ್ಯಗಳ ಬಗ್ಗೆ ಕೇಂದ್ರದ ಪಕ್ಷಪಾತ ಧೋರಣೆಯು ಸೌಹಾರ್ದಕ್ಕೆ ಧಕ್ಕೆ ತರುತ್ತದೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸು ಕರ್ನಾಟಕದಂತಹ ರಾಜ್ಯಗಳ ಅಚಲ ಕೊಡುಗೆಯಿಂದ ಮಾತ್ರ ನನಸಾಗಬಹುದು, ಆದರೂ ಕೇಂದ್ರ ಸರ್ಕಾರ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇದೆ. ತಮ್ಮ ಸಂಪನ್ಮೂಲಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ರಾಜ್ಯಗಳಿಗೆ ಕರ್ನಾಟಕದ ತೆರಿಗೆ ಕೊಡುಗೆಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಕರ್ನಾಟಕದ ಸಂಪನ್ಮೂಲಗಳು ರಾಜ್ಯದ ಜನರಿಗೆ ಸೇವೆ ಸಲ್ಲಿಸದಿದ್ದರೆ ತೆರಿಗೆಯಿಂದ ಏನು ಪ್ರಯೋಜನ? ಸಂಕಷ್ಟದ ಸಮಯದಲ್ಲಿ ಕನ್ನಡಿಗರು ಕಷ್ಟಪಟ್ಟು ದುಡಿದ ಹಣವನ್ನು ಅವರ ಕಣ್ಣೀರು ಒರೆಸಲು ಬಳಸದಿದ್ದರೆ, ಈ ಒಕ್ಕೂಟ ರಚನೆಯ ಉದ್ದೇಶವೇನು? ಈ ಪ್ರಶ್ನೆಗಳನ್ನು ನಾವು ಎದುರಿಸಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ‘ನಮ್ಮ ತೆರಿಗೆ ನಮ್ಮ ಹಕ್ಕು’ ಅಭಿಯಾನ ಆರಂಭಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಕೇಂದ್ರ ಸಚಿವರು ಮತ್ತು ಬಿಜೆಪಿ ಸಂಸದರು ದೆಹಲಿಯಲ್ಲಿ ರಾಜ್ಯಕ್ಕಾಗಿ ಏಕೆ ಧ್ವನಿ ಎತ್ತುತ್ತಿಲ್ಲ? ಹಣಕಾಸು ಸಚಿವರು ಕರ್ನಾಟಕದಿಂದ ಚುನಾಯಿತರಾಗಿದ್ದು, ಕರ್ನಾಟಕದಿಂದ 3-4 ಸಚಿವರಿದ್ದಾರೆ ಆದರೆ ಯಾರೂ ಈ ಬಗ್ಗೆ ಧ್ವನಿ ಎತ್ತಲಿಲ್ಲ. ಈ ಹೋರಾಟದಲ್ಲಿ ಬಿಜೆಪಿ ನಾಯಕರು ಕೈಜೋಡಿಸಬೇಕೆಂದು ನಾವು ಬಯಸುತ್ತೇವೆ ಎಂದು ಡಿಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT