ರೌಡಿ ಶೀಟರ್ ಪ್ರಕಾಶ್ ಮುಧೋಳ  
ರಾಜ್ಯ

ಮೈಸೂರು ದಸರಾದಲ್ಲಿ ಗಣ್ಯರ ನಡುವೆ ರೌಡಿಶೀಟರ್: ವ್ಯಾಪಕ ಆಕ್ರೋಶ

ಡಿಸಿಎಂ ಶಿವಕುಮಾರ್ ಮತ್ತು ಎಂಎಲ್‌ಸಿ ಯತೀಂದ್ರ ಅವರೊಂದಿಗೆ ಆತ ಸೆಲ್ಫಿ ತೆಗೆದುಕೊಂಡಿರುವುದು ವರದಿಯಾಗಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಂಧಿತನಾಗಿದ್ದ ಬಾಗಲಕೋಟೆಯ ರೌಡಿಶೀಟರ್ ಪ್ರಕಾಶ್ ಮುಧೋಳ ಶನಿವಾರ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಗಣ್ಯರ ನಡುವೆ ಕುಳಿತಿರುವುದು ಕಂಡುಬಂದಿದೆ.

ವಿಐಪಿ ವಿಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರ ಮಧ್ಯೆ ರೌಡಿ ಶೀಟರ್ ಹೇಗೆ ಕುಳಿತುಕೊಂಡರು, ಗೌರವಾನ್ವಿತ ವೇದಿಕೆಯಲ್ಲಿ ಆತನ ಉಪಸ್ಥಿತಿಯ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಡಿಸಿಎಂ ಶಿವಕುಮಾರ್ ಮತ್ತು ಎಂಎಲ್‌ಸಿ ಯತೀಂದ್ರ ಅವರೊಂದಿಗೆ ಆತ ಸೆಲ್ಫಿ ತೆಗೆದುಕೊಂಡಿರುವುದು ವರದಿಯಾಗಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ನಾಯಕರ ನಡುವೆ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕೂರಿಸುವುದು ಹೇಗೆ ಎಂದು ಜನರು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, 11 ಕ್ರಿಮಿನಲ್ ಪ್ರಕರಣಗಳಿರುವ ರೌಡಿಶೀಟರ್‌ಗೆ ರಾಜ್ಯದ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮವಾದ ಮೈಸೂರು ದಸರಾದಲ್ಲಿ ಗಣ್ಯರ ನಡುವೆ ಕುಳಿತುಕೊಳ್ಳಲು ಅವಕಾಶ ಮಾಡಿಕೊಟ್ಟಿರುವುದು ಉತ್ಸವದ ಪಾವಿತ್ರ್ಯತೆಯನ್ನು ಹಾಳು ಮಾಡಿದೆ. ‘ಅಪರಾಧದ ಹಿನ್ನೆಲೆಯವರನ್ನು ಅತಿಥಿಗಳನ್ನಾಗಿ ಗೌರವಿಸುವುದು ದುರಂತವೇ ಸರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರ ಸಾಲಿನಲ್ಲಿ ರೌಡಿ ಶೀಟರ್‌ ಪ್ರಕಾಶ್‌ ಕೂಡ ಇದ್ದಾನೆ. ಇದರಿಂದ ನಾಡಿಗೆ ಯಾವ ಸಂದೇಶ ರವಾನೆಯಾಗುತ್ತದೆ? ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ‘ಎಕ್ಸ್‌’ ಮೂಲಕ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT