ಗೋವಿಂದ ಕಾರಜೋಳ 
ರಾಜ್ಯ

ಚಿತ್ರದುರ್ಗದ ನೀರಿನ ಸಮಸ್ಯೆ ಪರಿಹರಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಅಗತ್ಯವಿದೆ: ಗೋವಿಂದ ಕಾರಜೋಳ

ಈ ಯೋಜನೆಯು ಸಾಕಾರಗೊಂಡರೆ, ಚಿತ್ರದುರ್ಗದಲ್ಲಿನ ಎಲ್ಲಾ ನೀರಿನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ" ಎಂದು ಕಾರಜೋಳ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದ 5,300 ಕೋಟಿ ರೂ. ಬಿಡುಗಡೆ ವಿಳಂಬದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನಿಂದ ಪದೇ ಪದೇ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಸಂಸದ ಗೋವಿಂದ ಕಾರಜೋಳ ಹಣ ಬಿಡುಗಡೆಯ ತುರ್ತು ಅಗತ್ಯವನ್ನು ಒತ್ತಿ ಹೇಳಿದರು.

ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಗೊತ್ತುಪಡಿಸಲಾದ ಭದ್ರಾ ಮೇಲ್ದಂಡೆ ಯೋಜನೆಯು ಮಧ್ಯ ಕರ್ನಾಟಕವನ್ನು ಕಾಡುತ್ತಿರುವ ತೀವ್ರ ನೀರಿನ ಕೊರತೆಯನ್ನು ಪರಿಹರಿಸುವ ಪ್ರಮುಖ ಯೋಜನೆಯಾಗಿದೆ. ಚಿತ್ರದುರ್ಗ ಪ್ರಸ್ತುತ ದೇಶದಲ್ಲಿ ಎರಡನೇ ಅತಿ ಹೆಚ್ಚು ಬರಪೀಡಿತ ಜಿಲ್ಲೆಯಾಗಿದ್ದು, ರಾಜಸ್ಥಾನದ ಕೆಲವು ಭಾಗಗಳನ್ನು ಮೀರಿಸಿದೆ ಎಂದು ಕಾರಜೋಳ ಹೇಳಿದ್ದಾರೆ. ಹಣ ಬಿಡುಗಡೆಯ ತುರ್ತು ಅಗತ್ಯವನ್ನು ಒತ್ತಿ ಹೇಳಿದ ಅವರು, ಶೀಘ್ರದಲ್ಲೇ ಕೇಂದ್ರದ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಚರ್ಚಿಸುವುದಾಗಿ ಭರವಸೆ ನೀಡಿದರು. "ಈ ಯೋಜನೆಯು ಸಾಕಾರಗೊಂಡರೆ, ಚಿತ್ರದುರ್ಗದಲ್ಲಿನ ಎಲ್ಲಾ ನೀರಿನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ" ಎಂದು ಕಾರಜೋಳ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕರ್ನಾಟಕದ ಜಲಸಂಪನ್ಮೂಲ ಸಚಿವರಾಗಿದ್ದ ತಮ್ಮ ಅಧಿಕಾರಾವಧಿಯನ್ನು ನೆನಪಿಸಿಕೊಂಡ ಕಾರಜೋಳ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹಣ ಬಿಡುಗಡೆ ವಿಳಂಬವನ್ನು ಪರಿಹರಿಸಲು ಹಿಂದಿನ ಪ್ರಯತ್ನಗಳನ್ನು ಮೆಲುಕು ಹಾಕಿದರು. ಭದ್ರಾ ಮೇಲ್ಜಂಡೆ ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಲು ನಾವು ಇಲಾಖಾ ಮುಖ್ಯಸ್ಥರ ಸಭೆಗೆ ದೆಹಲಿಗೆ ತೆರಳಿದ್ದೆವು. ತಾಂತ್ರಿಕ ಕಾರಣಗಳಿಂದ ಹಣ ಬಿಡುಗಡೆಯಾಗಿಲ್ಲ. ಆದರೆ ಇಲಾಖೆಯ ಕಾರ್ಯಚಟುವಟಿಕೆಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಮತ್ತು ಈ ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂಬ ಭರವಸೆಯಿದೆ ಎಂದು ವಿವರಿಸಿದರು.

ವಿಜಯಪುರವು ಈ ಹಿಂದೆ ಕರ್ನಾಟಕದಲ್ಲಿ ಅತಿ ಹೆಚ್ಚು ಬರಪೀಡಿತ ಪ್ರದೇಶವಾಗಿತ್ತು. ಈಗ ಚಿತ್ರದುರ್ಗವು ದುರದೃಷ್ಟಕರ ಪಟ್ಟವನ್ನು ತೆಗೆದುಕೊಂಡಿದೆ ಎಂದು ಕಾರಜೋಳ ತಿಳಿಸಿದ್ದಾರೆ.

ಅನಿಯಮಿತ ಮುಂಗಾರು ಮಳೆಯಿಂದ ಇಡೀ ಜಿಲ್ಲೆ ತೀವ್ರವಾಗಿ ಪರಿಣಾಮ ಬೀರಿದ್ದು, ಕೃಷಿ ಮತ್ತು ಜೀವನೋಪಾಯವು ದುರ್ಬಲವಾಗಿದೆ ಎಂದರು. ಆದರೆ, ಭದ್ರಾ ಮೇಲ್ದಂಡೆ ಯೋಜನೆಯು ಯಶಸ್ವಿಯಾಗಿ ಅನುಷ್ಠಾನಗೊಂಡರೆ, ಕೆರೆಗೆಳು ಮತ್ತು ನೀರಾವರಿ ಜಾಲಗಳನ್ನು ಪುನರುಜ್ಜೀವನಗೊಳಿಸುತ್ತದೆ, ಜಿಲ್ಲೆಯನ್ನು ಪರಿವರ್ತಿಸುತ್ತದೆ ಮತ್ತು ಹಸಿರಾಗಿಸುತ್ತದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಹಿಂದೆ ಪ್ರಾರಂಭವಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನಂತಹ ದೊಡ್ಡ ಪ್ರಮಾಣದ ಯೋಜನೆಗಳು ಸ್ಥಳೀಯರಿಗೆ ಗಮನಾರ್ಹ ಉದ್ಯೋಗವನ್ನು ಸೃಷ್ಟಿಸಲು ವಿಫಲವಾಗಿವೆ ಎಂದು ವಿಷಾದಿಸಿದರು. ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಹೆಚ್ಚಿನ ಉದ್ಯೋಗ-ಉತ್ಪಾದನೆಯ ಯೋಜನೆಗಳಿಗೆ ಅವರು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT