ಮುಳ್ಳಯ್ಯನಗಿರಿ 
ರಾಜ್ಯ

GSI: ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಶ್ರೇಣಿ Danger zones ಪಟ್ಟಿಗೆ ಸೇರ್ಪಡೆ

ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣಗಳನ್ನು ಗುರುತಿಸಲು ಜಿಎಸ್ಐ ಸಮೀಕ್ಷೆ ನಡೆಸಿತು. ಈ ಸಂಬಂಧ ಮುಂಜಾಗ್ರತಾ ಕ್ರಮಕ್ಕೆ ಶಿಫಾರಸು ಮಾಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ.

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಜೊತೆಗೆ ಮುಳ್ಳಯ್ಯನಗಿರಿ ಮತ್ತು ಚಂದ್ರದ್ರೋಣ ಪರ್ವತದ ಶ್ರೇಣಿಗಳನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಅಪಾಯಕಾರಿ ವಲಯಗಳ ಪಟ್ಟಿಗೆ ಸೇರಿಸಿದೆ.

ಇತ್ತೀಚೆಗೆ, ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣಗಳನ್ನು ಗುರುತಿಸಲು ಜಿಎಸ್ಐ ಸಮೀಕ್ಷೆ ನಡೆಸಿತು. ಈ ಸಂಬಂಧ ಮುಂಜಾಗ್ರತಾ ಕ್ರಮಕ್ಕೆ ಶಿಫಾರಸು ಮಾಡಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ.

ಕೇರಳದ ವಯನಾಡ್ ಪ್ರದೇಶದಲ್ಲಿ ಸಂಭವಿಸಿದ ದುರಂತದ ನಂತರ, ರಾಜ್ಯ ಸರ್ಕಾರವು ಭೂಕುಸಿತ ಮತ್ತು ಪ್ರವಾಹದಂತಹ ನೈಸರ್ಗಿಕ ವಿಕೋಪಗಳಿಗೆ ಒಳಗಾಗುವ ಪ್ರದೇಶಗಳ ಪಟ್ಟಿಯನ್ನು ಸಂಗ್ರಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಅದರಂತೆ ಜಿಲ್ಲಾಡಳಿತ 77 ಅನಾಹುತ ಪೀಡಿತ ಸ್ಥಳಗಳನ್ನು ಗುರುತಿಸಿ ಸರಕಾರಕ್ಕೆ ವರದಿ ಸಲ್ಲಿಸಿತ್ತು.

ಚಂದ್ರದ್ರೋಣ ಪರ್ವತ ಶ್ರೇಣಿ

ಆಗಸ್ಟ್‌ನಲ್ಲಿ ಜಿಎಸ್‌ಐ ತಂಡವು ಮುಳ್ಳಯ್ಯನಗಿರಿ, ದತ್ತ ಪೀಠ ಮತ್ತು ಚಂದ್ರದ್ರೋಣ ಬೆಟ್ಟ ಶ್ರೇಣಿಗಳಿಗೆ ಭೇಟಿ ನೀಡಿ, ಭೂಕುಸಿತ ಮತ್ತು ಪ್ರವಾಹದ ಕಾರಣಗಳನ್ನು ಅಧ್ಯಯನ ಮಾಡಿತು. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ "ಬುದ್ಧಿಹೀನ ಮತ್ತು ಅವೈಜ್ಞಾನಿಕ" ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು ಭೂಕುಸಿತಕ್ಕೆ ಕಾರಣವೆಂದು ವರದಿ ಹೇಳಿದೆ. ಮುಳ್ಳಯ್ಯನಗಿರಿ ಮತ್ತು ಚಂದ್ರದ್ರೋಣ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸಹ ನಿಷೇಧಿಸಬೇಕು ಎಂದು ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT