ಗೊ. ರು. ಚನ್ನಬಸಪ್ಪ 
ರಾಜ್ಯ

ದರ್ಶನ್ ಅಭಿಮಾನಿಗಳ ಪಟಾಕಿ ಸದ್ದಿನಿಂದ ಶ್ರವಣಶಕ್ತಿ ಕಳೆದುಕೊಂಡೆ: ಸಾಹಿತಿ ಗೊ.ರು ಚನ್ನಬಸಪ್ಪ

ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್‌ ಅವರ ಮನೆ ಇದೆ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು.

ಗದಗ: ನಟ ದರ್ಶನ್‌ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಅಭಿಮಾನಿಗಳು ಸಿಡಿಸಿದ ಪಟಾಕಿ ಸದ್ದಿನಿಂದ ನನ್ನ ಶ್ರವಣಶಕ್ತಿ ಹೋಯಿತು ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ನೊಂದು ನುಡಿದಿದ್ದಾರೆ.

ಸೋಮವಾರ ನಡೆದ ಸಿದ್ಧಲಿಂಗ ಶ್ರೀಗಳ ಆರನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ‘ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್‌ ಅವರ ಮನೆ ಇದೆ’ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು. ಅದರ ಸದ್ದಿನಿಂದ ನನ್ನ ಶ್ರವಣಶಕ್ತಿ ಹೋಯಿತು ಎಂದರು.

97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡುತ್ತೇನೆ, ಯಾವುದೇ ತೊಂದರೆ ಇಲ್ಲದೆ ನಡೆದಾಡುತ್ತೇನೆ. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT