ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ವರುಣನ ಅಬ್ಬರ; IMD ಎಚ್ಚರಿಕೆ

ಕಳೆದೊಂದು ವಾರದಿಂದ ಅಲ್ಪಸ್ವಲ್ಪ ಮಳೆಯಾಗುತ್ತಿದ್ದ ಬೆಂಗಳೂರಿನಲ್ಲಿ ಅ. 15ರ ಬೆಳಗಿನ ಜಾವದಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಶುರುವಾಗಿದೆ. ಅದರ ಪರಿಣಾಮವಾಗಿ, ಬೆಂಗಳೂರಿನಲ್ಲಿ ಅ. 15ರಿಂದ 20ವರೆಗೆ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಮೊದಲೇ ಎಚ್ಚರಿಸಿದೆ. ಅದರ ಪ್ರಕಾರ, ಕಳೆದೊಂದು ವಾರದಿಂದ ಅಲ್ಪಸ್ವಲ್ಪ ಮಳೆಯಾಗುತ್ತಿದ್ದ ಬೆಂಗಳೂರಿನಲ್ಲಿ ಅ. 15ರ ಬೆಳಗಿನ ಜಾವದಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗಬಹುದು ಎಂದು ತಿಳಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ತಜ್ಞರ ಪ್ರಕಾರ, ಮಧ್ಯ ಅರೇಬಿಯನ್ ಸಮುದ್ರದಿಂದ ಕೊಮೊರಿನ್ ಪ್ರದೇಶದಿಂದ ದಕ್ಷಿಣ ಕೇರಳ ಮತ್ತು ತಮಿಳುನಾಡಿನಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ಮತ್ತು 5.8 ಕಿಮೀ ನಡುವೆ ಚಂಡಮಾರುತದ ಪರಿಚಲನೆ ಇದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡವಿದೆ. ದಕ್ಷಿಣ ಕರಾವಳಿಯ ಆಂಧ್ರಪ್ರದೇಶದ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ಎತ್ತರದಲ್ಲಿದೆ, ಹೀಗಾಗಿ ಅಕ್ಟೋಬರ್ 20 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಸಿ ಎಸ್ ಪಾಟೀಲ್ ಹೇಳಿದ್ದಾರೆ.

IMD ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 1 ರಿಂದ 14 ರವರೆಗೆ, ಒಟ್ಟಾರೆಯಾಗಿ ರಾಜ್ಯದಲ್ಲಿ 87.3 ಮಿಮೀ ಮಳೆಯಾಗಿದೆ. 74.7 ಮಿಮೀ ಮಳೆಯ ಮುನ್ಸೂಚನೆಯ ವಿರುದ್ಧ, ಮಳೆಯಲ್ಲಿ ಶೇ| 17 ಏರಿಕೆ ದಾಖಲಾಗಿದೆ. ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ 101.4 ಮಿಮೀ ಮಳೆ ದಾಖಲಾಗಿದೆ, ಇದು ಶೇ. 36 ಹೆಚ್ಚುವರಿಯಾಗಿದೆ. ಉತ್ತರ ಒಳಭಾಗದಲ್ಲಿ ಶೇ.2ರಷ್ಟು ಕೊರತೆ ದಾಖಲಾಗಿದೆ. 65.7ಮಿಮೀ ಸಾಮಾನ್ಯ ಮುನ್ಸೂಚನೆಗೆ ವಿರುದ್ಧವಾಗಿ 64.2ಮಿಮೀ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಶೇ.2ರಷ್ಟು ಅಧಿಕ ಮಳೆ ದಾಖಲಾಗಿದೆ. ಅಕ್ಟೋಬರ್ 14 ರಂದು ಬೆಳಿಗ್ಗೆ 8.30 ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ, ರಾಜ್ಯದಲ್ಲಿ ಸರಾಸರಿ 5.6 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಸರಾಸರಿ 2.5 ಮಿಮೀ ಮಳೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!