ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ವರುಣನ ಅಬ್ಬರ; IMD ಎಚ್ಚರಿಕೆ

ಕಳೆದೊಂದು ವಾರದಿಂದ ಅಲ್ಪಸ್ವಲ್ಪ ಮಳೆಯಾಗುತ್ತಿದ್ದ ಬೆಂಗಳೂರಿನಲ್ಲಿ ಅ. 15ರ ಬೆಳಗಿನ ಜಾವದಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಶುರುವಾಗಿದೆ. ಅದರ ಪರಿಣಾಮವಾಗಿ, ಬೆಂಗಳೂರಿನಲ್ಲಿ ಅ. 15ರಿಂದ 20ವರೆಗೆ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಮೊದಲೇ ಎಚ್ಚರಿಸಿದೆ. ಅದರ ಪ್ರಕಾರ, ಕಳೆದೊಂದು ವಾರದಿಂದ ಅಲ್ಪಸ್ವಲ್ಪ ಮಳೆಯಾಗುತ್ತಿದ್ದ ಬೆಂಗಳೂರಿನಲ್ಲಿ ಅ. 15ರ ಬೆಳಗಿನ ಜಾವದಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗಬಹುದು ಎಂದು ತಿಳಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ತಜ್ಞರ ಪ್ರಕಾರ, ಮಧ್ಯ ಅರೇಬಿಯನ್ ಸಮುದ್ರದಿಂದ ಕೊಮೊರಿನ್ ಪ್ರದೇಶದಿಂದ ದಕ್ಷಿಣ ಕೇರಳ ಮತ್ತು ತಮಿಳುನಾಡಿನಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ಮತ್ತು 5.8 ಕಿಮೀ ನಡುವೆ ಚಂಡಮಾರುತದ ಪರಿಚಲನೆ ಇದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡವಿದೆ. ದಕ್ಷಿಣ ಕರಾವಳಿಯ ಆಂಧ್ರಪ್ರದೇಶದ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ಎತ್ತರದಲ್ಲಿದೆ, ಹೀಗಾಗಿ ಅಕ್ಟೋಬರ್ 20 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಸಿ ಎಸ್ ಪಾಟೀಲ್ ಹೇಳಿದ್ದಾರೆ.

IMD ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 1 ರಿಂದ 14 ರವರೆಗೆ, ಒಟ್ಟಾರೆಯಾಗಿ ರಾಜ್ಯದಲ್ಲಿ 87.3 ಮಿಮೀ ಮಳೆಯಾಗಿದೆ. 74.7 ಮಿಮೀ ಮಳೆಯ ಮುನ್ಸೂಚನೆಯ ವಿರುದ್ಧ, ಮಳೆಯಲ್ಲಿ ಶೇ| 17 ಏರಿಕೆ ದಾಖಲಾಗಿದೆ. ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ 101.4 ಮಿಮೀ ಮಳೆ ದಾಖಲಾಗಿದೆ, ಇದು ಶೇ. 36 ಹೆಚ್ಚುವರಿಯಾಗಿದೆ. ಉತ್ತರ ಒಳಭಾಗದಲ್ಲಿ ಶೇ.2ರಷ್ಟು ಕೊರತೆ ದಾಖಲಾಗಿದೆ. 65.7ಮಿಮೀ ಸಾಮಾನ್ಯ ಮುನ್ಸೂಚನೆಗೆ ವಿರುದ್ಧವಾಗಿ 64.2ಮಿಮೀ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಶೇ.2ರಷ್ಟು ಅಧಿಕ ಮಳೆ ದಾಖಲಾಗಿದೆ. ಅಕ್ಟೋಬರ್ 14 ರಂದು ಬೆಳಿಗ್ಗೆ 8.30 ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ, ರಾಜ್ಯದಲ್ಲಿ ಸರಾಸರಿ 5.6 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಸರಾಸರಿ 2.5 ಮಿಮೀ ಮಳೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT