ಬಸ್ ಚಾಲಕ ಬೀಡಿ ಸೇದುತ್ತಿರುವುದು  
ರಾಜ್ಯ

ಬಸ್ ಚಾಲನೆ ಮಾಡುವಾಗ ಬೀಡಿ ಸೇದಿದ ಚಾಲಕ: ವಿಡಿಯೊ ವೈರಲ್, ಕ್ರಮಕ್ಕೆ ಆಗ್ರಹ

ಸರ್ಕಾರದ ನಿಯಮ ಪ್ರಕಾರ ಬಸ್ ಚಾಲನೆ ಮಾಡುವಾಗ ತಂಬಾಕು ಸೇವನೆ, ಯಾವುದೇ ತಂಬಾಕು ಆಧಾರಿತ ಮಸಾಲಾ ಸೇವನೆ ಮಾಡುವುದು, ಬೀಡಿ-ಸಿಗರೇಟ್ ಎಳೆಯುವುದು ಕಾನೂನಿಗೆ ವಿರುದ್ಧವಾಗಿರುತ್ತದೆ.

ಕೊಪ್ಪಳ: ಬಸ್ ಚಲಾಯಿಸುತ್ತಿರುವಾಗ ಬೀಡಿ ಸೇದಿ ಕೆಎಸ್‌ಆರ್‌ಟಿಸಿ ಚಾಲಕರೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಾಲಕನ ಹಿಂದೆ ಕುಳಿತಿದ್ದ ಯುವ ಪ್ರಯಾಣಿಕ ಚಾಲಕನ ವಿಡಿಯೊ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು ವೈರಲ್ ಆಗಿ ಸಮಸ್ಯೆಗೆ ಸಿಲುಕಿದ್ದಾರೆ.

ಕೆಎಸ್‌ಆರ್‌ಟಿಸಿ ನಿಯಮಗಳನ್ನು ಚಾಲಕ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸರ್ಕಾರದ ನಿಯಮ ಪ್ರಕಾರ ಬಸ್ ಚಾಲನೆ ಮಾಡುವಾಗ ತಂಬಾಕು ಸೇವನೆ, ಯಾವುದೇ ತಂಬಾಕು ಆಧಾರಿತ ಮಸಾಲಾ ಸೇವನೆ ಮಾಡುವುದು, ಬೀಡಿ-ಸಿಗರೇಟ್ ಎಳೆಯುವುದು ಕಾನೂನಿಗೆ ವಿರುದ್ಧವಾಗಿರುತ್ತದೆ. ಹೀಗೆ ಚಾಲಕ ಬೀಡಿ ಎಳೆಯುತ್ತಿರುವಾಗ ಬಸ್ ಗಂಗಾವತಿಯಿಂದ ಕೊಲ್ಲಾಪುರಕ್ಕೆ ತೆರಳುತ್ತಿತ್ತು. ಕೆಎ 23 ಎಫ್ 1045 ನೋಂದಣಿ ಸಂಖ್ಯೆಯ ಬಸ್ ಕೆಎಸ್‌ಆರ್‌ಟಿಸಿ ನಿಪ್ಪಾಣಿ ಡಿಪೊಗೆ ಸೇರಿದೆ.

ಚಾಲಕ ಒಂದು ಕೈಯಿಂದ ಬೀಡಿ ಸೇದುತ್ತಿದ್ದು, ಇನ್ನೊಂದು ಕೈಯನ್ನು ಸ್ಟೀರಿಂಗ್ ಮೇಲೆ ಕೈ ಇಟ್ಟು ಬಸ್ ಚಲಾಯಿಸುತ್ತಿದ್ದ. ಬಸ್ ನಲ್ಲಿ ನೂರಾರು ಪ್ರಯಾಣಿಕರಿದ್ದು ಅವರನ್ನು ಸುರಕ್ಷಿತವಾಗಿ ಅವರ ಸ್ಥಳಗಳಿಗೆ ಸಾಗಿಸುವ ಜವಾಬ್ದಾರಿ ಚಾಲಕನ ಮೇಲಿದೆ ಎಂದು ಕೆಲವು ಪ್ರಯಾಣಿಕರು ಕೊಪ್ಪಳ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೀಡಿ ಸೇದುವ ಚಾಲಕರು ವಾಹನ ಚಲಾಯಿಸುವಾಗ ತಮ್ಮ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ನಿಯಮ ಉಲ್ಲಂಘಿಸಿ ಮಕ್ಕಳು, ಮಹಿಳೆಯರು ಹಾಗೂ ಇತರ ಪ್ರಯಾಣಿಕರ ಸಮ್ಮುಖದಲ್ಲಿ ಧೂಮಪಾನ ಮಾಡುವ ಚಾಲಕರನ್ನು ಅಮಾನತುಗೊಳಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ. ಬಸ್ಸಿನೊಳಗೆ ಬೀಡಿ ಹೊಗೆ ಹರಡಿದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗದಗ ಕೆಎಸ್‌ಆರ್‌ಟಿಸಿಯ ಅಧಿಕಾರಿ, ನಮಗೆ ಕೆಲವು ದೂರುಗಳು ಬಂದಿವೆ. ಚಾಲಕ ವಾಹನ ಚಲಾಯಿಸುವಾಗ ಬೀಡಿ ಸೇದುತ್ತಿರುವ ವೀಡಿಯೊವನ್ನು ನೋಡಿದ್ದೇವೆ ಈ ಬಗ್ಗೆ ಹೆಚ್ಚಿನ ವಿವರಗಳು ಸಿಕ್ಕಿಲ್ಲ. ಈ ಘಟನೆ ನಿಖರವಾಗಿ ಎಲ್ಲಿ ಸಂಭವಿಸಿದೆ ಎಂಬುದನ್ನು ನಾವು ಪರಿಶೀಲಿಸುತ್ತೇವೆ, ಚಾಲಕನನ್ನು ಗುರುತಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ವಿಚಾರಣೆಯನ್ನು ಪ್ರಾರಂಭಿಸುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT