ಗಣೇಶ ಮೆರವಣಿಗೆ 
ರಾಜ್ಯ

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; 48 ಆರೋಪಿಗಳಿಗೆ ಜಾಮೀನು!

ಕಲ್ಲು ತೂರಾಟದ ಬಳಿಕ ಗಲಭೆಗೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದ್ದು ಅದ್ಧೂರಿ ಸ್ವಾಗತ ದೊರೆತಿದೆ.

ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಸೆಪ್ಟೆಂಬರ್ 19ರಂದು ದಾವಣಗೆರೆಯ ಅರಳಿಮರ ಸರ್ಕಲ್​ ಬಳಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸೇರಿ 48 ಆರೋಪಿಗಳಿಗೆ ಕೋರ್ಟ್​ ಜಾಮೀನು ನೀಡಿದೆ.

ಕಲ್ಲು ತೂರಾಟದ ಬಳಿಕ ಗಲಭೆಗೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದ್ದು ಅದ್ಧೂರಿ ಸ್ವಾಗತ ದೊರೆತಿದೆ. ಸತೀಶ್ ಪೂಜಾರಿ ಮನೆಯ ಸುತ್ತಮುತ್ತ ನೆರೆದಿದ್ದ ಹಿಂದೂ ಯುವಕರು ಜೈಕಾರ ಹಾಕಿ ಬರ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ಬ್ರಿಕ್ಸ್‌ ಶೃಂಗಸಭೆಗೆ ದೆಹಲಿಗೆ ಬಂದಿಳಿದ ಕ್ಸಿ ಜಿನ್‌ಪಿಂಗ್; ಕುತೂಹಲ ಕೆರಳಿಸಿದ ಭಾರತ-ಚೀನಾ ಮಾತುಕತೆ

ಕ್ಯಾಲಿಫೋರ್ನಿಯಾದ ರೆಸ್ಟೋರೆಂಟ್ ಹೊರಗೆ ಭಾರತೀಯ ಮೂಲದ ಮಹಿಳೆಗೆ ಗುಂಡಿಕ್ಕಿ ಹತ್ಯೆ, ಆರೋಪಿ ಆತ್ಮಹತ್ಯೆ!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ: ಇನ್ಸ್​​ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!

Non Committal?: 'ಎಷ್ಟು ರಿಹರ್ಸಲ್ ಮಾಡಿಸ್ತೀರೋ.. ಆದ್ರೆ ಬರ್ತಾ ಇದೀನಿ'!, ಅಗರ್ಕರ್, ಗಂಭೀರ್ ರೋಸ್ಟ್ ಮಾಡಿದ್ರಾ Rohit Sharma?

Ganesh Chaturthi: ಬೆಂಗಳೂರಿನಲ್ಲಿ ಈ ದಿನ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ! ಕಸಾಯಿಖಾನೆಗಳು ಬಂದ್