ಸಾಂದರ್ಭಿಕ ಚಿತ್ರ 
ರಾಜ್ಯ

BEML: ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ

ಭಾರತದ ಅತಿ ವೇಗದ ರೈಲು ಅಭಿವೃದ್ಧಿ ಯೋಜನೆಯಲ್ಲಿ ಇದೊಂದು ಮೈಲಿಗಲ್ಲಾಗಲಿದೆ. ಗಂಟೆಗೆ 280 ಕಿ.ಮೀ. ವೇಗದಲ್ಲಿ ಸಾಗುವ ಸಾಮರ್ಥ್ಯವಿರುವ ಸ್ವದೇಶಿ ನಿರ್ಮಿತ ರೈಲು ಇದಾಗಲಿದೆ. ಈ ರೈಲು ಬೆಂಗಳೂರಿನಲ್ಲಿರುವ ರೈಲು ಕೋಚ್ ಸಂಕೀರ್ಣದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಬೆಂಗಳೂರು: ಅತಿವೇಗದ ಎರಡು ರೈಲುಗಳ ವಿನ್ಯಾಸ ಹಾಗೂ ತಯಾರಿಕೆಗೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಭಾರತೀಯ ರೈಲ್ವೆ ಇಲಾಖೆಯ ಅಧೀನಕ್ಕೆ ಸೇರಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಿಂದ (ಐಸಿಎಫ್‌) 866.87 ಕೋಟಿ ರು. ಮೌಲ್ಯದ ಗುತ್ತಿಗೆ ಲಭಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಇಎಂಎಲ್‌ ಮಂಗಳವಾರ ತಿಳಿಸಿದೆ.

ಪ್ರತಿ ರೈಲು ಎಂಟು ಬೋಗಿಗಳನ್ನು ಒಳಗೊಂಡಿದೆ. ಗಂಟೆಗೆ 280 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರಲಿದೆ. ಇದು ಮುಂಬೈ ಹಾಗೂ ಅಹಮದಾಬಾದ್ ನಡುವೆ ನಿರ್ಮಿಸಲಾಗುತ್ತಿರುವ ಅತಿವೇಗದ ರೈಲ್ವೆ ಕಾರಿಡಾರ್‌ನಲ್ಲಿ (ಬುಲೆಟ್‌ ರೈಲು ಯೋಜನೆ) 2027ರಿಂದ ಬಳಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಮಾದರಿಯ ಒಂದು ರೈಲಿನ ವೆಚ್ಚ 27.86 ಕೋಟಿಯಾಗಲಿದೆ. ಇದರ ವಿನ್ಯಾಸ, ಅಭಿವೃದ್ಧಿ ಸೇರಿ ಎಲ್ಲಾ ಅನುಭವಗಳನ್ನು ಬುಲೆಟ್ ರೈಲು ಅಭಿವೃದ್ಧಿಗೆ ಬಳಸಲಾಗುವುದು’ ಎಂದು ಹೇಳಿದೆ.

‘ಭಾರತದ ಅತಿ ವೇಗದ ರೈಲು ಅಭಿವೃದ್ಧಿ ಯೋಜನೆಯಲ್ಲಿ ಇದೊಂದು ಮೈಲಿಗಲ್ಲಾಗಲಿದೆ. ಗಂಟೆಗೆ 280 ಕಿ.ಮೀ. ವೇಗದಲ್ಲಿ ಸಾಗುವ ಸಾಮರ್ಥ್ಯವಿರುವ ಸ್ವದೇಶಿ ನಿರ್ಮಿತ ರೈಲು ಇದಾಗಲಿದೆ. ಈ ರೈಲು ಬೆಂಗಳೂರಿನಲ್ಲಿರುವ ರೈಲು ಕೋಚ್ ಸಂಕೀರ್ಣದಲ್ಲಿ ಅಭಿವೃದ್ಧಿಪಡಿಸಲಾಗುವುದು. ಜತೆಗೆ 2026ರ ಅಂತ್ಯದ ಹೊತ್ತಿಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ’ ಎಂದು ಬಿಇಎಂಎಲ್‌ ತಿಳಿಸಿದೆ. ‘ಈ ರೈಲು ಸಂಪೂರ್ಣ ಹವಾನಿಯಂತ್ರಿತ ಕೋಚ್‌ಗಳನ್ನು ಹೊಂದಿರಲಿದೆ. ಚೇರ್ ಕಾರ್‌ಗಳನ್ನು ಅಳವಡಿಸಲಾಗುವುದು. ಪ್ರಯಾಣಿಕರಿಗೆ ಪ್ರಯಾಣದ ಹೊಸ ಅನುಭೂತಿ ನೀಡುವ ಉದ್ದೇಶದೊಂದಿಗೆ ಹಿಂದಕ್ಕೆ ಬಾಗುವ ಹಾಗೂ ತಿರುಗುವ ಸೀಟುಗಳು ಇರಲಿವೆ. ಅಂಗವಿಕಲರಿಗಾಗಿ ವಿಶೇಷ ಆಸನ ವ್ಯವಸ್ಥೆ ಹಾಗೂ ಮನರಂಜನೆಗಾಗಿ ಇನ್ಫೋಟೈನ್ಮೆಂಟ್‌ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆ ಇದೆ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT