ಸಂಗ್ರಹ ಚಿತ್ರ 
ರಾಜ್ಯ

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: ಕುಟುಂಬದಲ್ಲಿ ಸಂತಸದ ವಾತಾವರಣ

ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾ ಅವರಿಗೆ ಹೆರಿಗೆ ಆಗಿದ್ದು, ಮಗನನ್ನು ಕಳೆದುಕೊಂಡಿದ್ದ ಕುಟುಂಬಕ್ಕೆ ಮಗುವಿನ ಆಗಮನದಿಂದ ಖುಷಿ ಸಿಕ್ಕಂತಾಗಿದೆ.

ಚಿತ್ರದುರ್ಗ: ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಮೊಮ್ಮಗನ ಆಗಮನದಿಂದ ರೇಣುಕಾಸ್ವಾಮಿ ಪೋಷಕರು ಸಂತಸಗೊಂಡಿದ್ದಾರೆ.

ರೇಣುಕಸ್ವಾಮಿ ಕೊಲೆಯಾದಾಗ ಸಹನಾ ಅವರು 5 ತಿಂಗಳ ಗರ್ಭಿಣಿಯಾಗಿದ್ದರು. ಬೆಳಿಗ್ಗೆ 6.55ರ ಸಮಯದಲ್ಲಿ ಅವರಿಗೆ ಸಹಜ ಹೆರಿಗೆಯಾಗಿದ್ದು ತಾಯಿ– ಮಗು ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ.

ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾ ಅವರಿಗೆ ಹೆರಿಗೆ ಆಗಿದ್ದು, ಮಗನನ್ನು ಕಳೆದುಕೊಂಡಿದ್ದ ಕುಟುಂಬಕ್ಕೆ ಮಗುವಿನ ಆಗಮನದಿಂದ ಖುಷಿ ಸಿಕ್ಕಂತಾಗಿದೆ.

ನಟ ದರ್ಶನ್ ಆಪ್ತ ಗೆಳತಿ ಪವಿತ್ರಾಗೆ ರೇಣುಕಾ ಸ್ವಾಮಿ ಫೇಕ್ ಖಾತೆ ಮೂಲಕ ಮೆಸೇಜ್ ಮಾಡಿದ್ದರು. ಈ ವಿಚಾರ ದರ್ಶನ್ ಅವರ ಕೋಪಕ್ಕೆ ಕಾರಣ ಆಗಿತ್ತು. ಇದರಿಂದ ರೇಣುಕಾ ಸ್ವಾಮಿಯನ್ನು ಪತ್ತೆ ಮಾಡಿ, ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್​ನಿಂದ ಆಗಿತ್ತು.

ಬೆಂಗಳೂರಿನ ಪಟ್ಟಣಗೆರೆಯ ಶೆಡ್​ನಲ್ಲಿ ರೇಣುಕಾಸ್ವಾಮಿ ಅವರನ್ನ ಕರೆತಂದು, ಶೆಡ್​ನಲ್ಲಿ ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು. ರೇಣುಕಾ ಸ್ವಾಮಿ ಅವರನ್ನ ನಟ ದರ್ಶನ್ ಹಾಗೂ ಗ್ಯಾಂಗ್ ಕೊಲೆ ಮಾಡಿದ್ದಾರೆ ಎಂದು ಆರೋಪ ಇದ್ದು, ಸದ್ಯ ಈ ಪ್ರಕರಣ ನ್ಯಾಯಾಲಯದ ಅಂಗಳದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT