ಬಂಧನ (ಸಾಂಕೇತಿಕ ಚಿತ್ರ) 
ರಾಜ್ಯ

1.22 ಕೋಟಿ ರೂ ಮೌಲ್ಯದ ಚಿನ್ನಾಭರಣ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

6 ತಿಂಗಳ ಹಿಂದೆ ಉದ್ಯಮಿಯ ಬಳಿ ಕೆಲಸ ಬಿಟ್ಟಿದ್ದ ಪಾಟೀಲ್, ಮತ್ತೊಬ್ಬ ಆರೋಪಿ ನಿತಿನ್ ಕಾಳೆ ಜೊತೆಗೂಡಿ ಕಳ್ಳತನಕ್ಕೆ ಯೋಜನೆ ರೂಪಿಸಿದ್ದ.

ಬೆಂಗಳೂರು: ಚಾಮರಾಜಪೇಟೆಯ ಉದ್ಯಮಿಯೊಬ್ಬರ ಮನೆಯಲ್ಲಿ 1.22 ಕೋಟಿ ರೂಪಾಯಿ ಮೌಲ್ಯದ 1 ಕೆಜಿ 570 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳf ಕಳವು ಮಾಡಿದ್ದ ಇಬ್ಬರು ಕಾರು ಚಾಲಕರನ್ನು ವಿವಿ ಪುರಂ ಪೊಲೀಸರು ಬಂಧನಕ್ಕೊಳಸಿಪಡಿಸಿದ್ದಾರೆ.

ಮುಂಬೈ ಮೂಲದ ಕೇಶವ್ ಪಾಟೀಲ್ (37) ಮತ್ತು ನಿತಿನ್ ಕಾಳೆ (31) ಬಂಧಿತ ಆರೋಪಿಗಳು. ಕೇಶವ್ ಪಾಟೀಲ್ ಉದ್ಯಮಿಯ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

6 ತಿಂಗಳ ಹಿಂದೆ ಉದ್ಯಮಿಯ ಬಳಿ ಕೆಲಸ ಬಿಟ್ಟಿದ್ದ ಪಾಟೀಲ್, ಮತ್ತೊಬ್ಬ ಆರೋಪಿ ನಿತಿನ್ ಕಾಳೆ ಜೊತೆಗೂಡಿ ಕಳ್ಳತನಕ್ಕೆ ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ದ ಚಿನ್ನವನ್ನು ಆರೋಪಿ ಕೇಶವ್ ಪಾಟೀಲ್ ಅಮೃತಹಳ್ಳಿಯಲ್ಲಿರುವ ತನ್ನ ಸೋದರ ಮಾವ ಮೋಹನ್ ಎಂಬುವವರ ಮನೆಯಲ್ಲಿ ಬಚ್ಚಿಟ್ಟಿದ್ದ. ಈ ವಿಚಾರ ತಿಳಿದ ಬಳಿಕ ಅವಮಾನಿತರಾಗಿ ಮೋಹನ್ ಅವರು ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT