ಮೃತ ಉದ್ಯಮಿ ಸಂತೋಷ್ ಮತ್ತು ಉಮಾ 
ರಾಜ್ಯ

ಬೆಳಗಾವಿ: ಉದ್ಯಮಿ ಸಾವಿಗೆ ಬಿಗ್ ಟ್ವಿಸ್ಟ್; ತಾಯಿಯ ವಿರುದ್ಧವೇ ದೂರು ನೀಡಿದ ಮಗಳು; ಶವ ಹೊರತೆಗೆದು ಪರೀಕ್ಷೆ

ಸಂತೋಷ್ ಪುತ್ರಿ ಸಂಜನಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸಂತೋಷ್ ಹೆಂಡತಿಯನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ. ಅಪರಾಧದಲ್ಲಿ ಅವಳಿಗೆ ಸಹಾಯ ಮಾಡಿದ ಆಕೆಯ ಸ್ನೇಹಿತನ ಹುಡುಕಾಟದಲ್ಲಿದ್ದಾರೆ.

ಬೆಳಗಾವಿ: ಇತ್ತೀಚೆಗಷ್ಟೇ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ್ ಪದ್ಮಣ್ಣನವರ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ಮಗಳೇ ತಾಯಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಂತೋಷ್ ಪುತ್ರಿ ಸಂಜನಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸಂತೋಷ್ ಹೆಂಡತಿಯನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ. ಅಪರಾಧದಲ್ಲಿ ಅವಳಿಗೆ ಸಹಾಯ ಮಾಡಿದ ಆಕೆಯ ಸ್ನೇಹಿತನ ಹುಡುಕಾಟದಲ್ಲಿದ್ದಾರೆ. ಬೆಳಗಾವಿಯ ಮಹಾಂತೇಶ ನಗರದ ನಿವಾಸಿ, ಸಾಮಾಜಿಕ ಕಾರ್ಯಕರ್ತ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದ ಸಂತೋಷ್ ಪದ್ಮಣ್ಣನವರ್ (47) ಅವರು ಅಕ್ಟೋಬರ್ 9 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಪತ್ನಿ ಉಮಾ ಪದ್ಮಣ್ಣನವರ್, ಒಬ್ಬ ಪುತ್ರಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಮೊನ್ನೆಯಷ್ಟೇ ಉಮಾ ಪದ್ಮಣ್ಣನವರ್ ಅವರು ಸಂತೋಷ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮನೆಯವರು, ಮಗಳು, ಪುತ್ರರು ಸೇರಿದಂತೆ ಎಲ್ಲರಿಗೂ ತಿಳಿಸಿದ್ದು, ಕೊನೆಯ ಆಸೆಯಂತೆ ಅವರ ಕಣ್ಣುಗಳನ್ನು ಖಾಸಗಿ ಆಸ್ಪತ್ರೆಗೆ ದಾನ ಮಾಡಿ ಅಕ್ಟೋಬರ್ 10ರಂದು ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಬೆಂಗಳೂರಿನಲ್ಲಿ ಓದುತ್ತಿರುವ ಸಂಜನಾ, ತಂದೆ ಆರೋಗ್ಯವಂತರಾಗಿದ್ದರಿಂದ ಅವರ ಹಠಾತ್ ನಿಧನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸಂತೋಷ್ ತನ್ನ ಮನೆಯಲ್ಲಿ ಸುಮಾರು 16 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರಿಂದ, ಅಂತ್ಯಕ್ರಿಯೆಯ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕೆಂದು ಹೊರಟಿದ್ದೆ.

ಆದರೆ ವೀಡಿಯೊಗಳನ್ನು ನೋಡುವ ಮೊದಲು ಉಮಾ ಸ್ನಾನ ಮಾಡುವಂತೆ ಮಗಳಿಗೆ ತಿಳಿಸಿದ್ದಳು. ಸ್ನಾನ ಮಾಡಿ ವೀಡಿಯೊಗಳನ್ನು ವೀಕ್ಷಿಸಲು ಅವಳು ಹಿಂತಿರುಗಿದಾಗ, ಸಿಸಿಟಿವಿ ದೃಶ್ಯಗಳನ್ನು ಅಳಿಸಲಾಗಿದೆ ಎಂದು ತಿಳಿಯಿತು. ಈ ಸಂಬಂಧ ಸಂಜನಾ ತನ್ನ ಕಿರಿಯ ಸಹೋದರರನ್ನು ವಿಚಾರಿಸಿದಾಗ, ಅವರು ತಮ್ಮ ತಾಯಿಯ ಸೂಚನೆಯಂತೆ ಸಿಸಿಟಿವಿ ದೃಶ್ಯಗಳನ್ನು ಅಳಿಸಿರುವುದಾಗಿ ಒಪ್ಪಿಕೊಂಡರು.

ತಾಯಿಯ ಮೇಲೆ ಅನುಮಾನಗೊಂಡ ಸಂಜನಾ ತನ್ನ ಚಿಕ್ಕಪ್ಪ ಮತ್ತು ಸಂಬಂಧಿಕರೊಂದಿಗೆ ಚರ್ಚಿಸಿ ತಾಯಿಯ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಅಕ್ಟೋಬರ್ 9 ರಂದು ಸಂತೋಷ್ ಸಾಯುವ ಮೊದಲು ಇಬ್ಬರು ಅಪರಿಚಿತ ವ್ಯಕ್ತಿಗಳು ಸಂತೋಷ್ ಅವರ ಮನೆಗೆ ಪ್ರವೇಶಿಸಿದ್ದನ್ನು ಪಕ್ಕದ ಮನೆಯ ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗಪಡಿಸಿವೆ.

ನಂತರ ಸಹಾಯಕ ಕಮಿಷನರ್ ಶ್ರವಣ್ ಕುಮಾರ್ ಅವರ ಸಮ್ಮುಖದಲ್ಲಿ ಪೊಲೀಸರು ಸಂತೋಷ್ ಅವರ ಶವವನ್ನು ಹೊರತೆಗೆದರು ಮತ್ತು ಸಾವಿಗೆ ನಿಖರವಾದ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲು ವಿಧಿವಿಜ್ಞಾನ ತಂಡಕ್ಕೆ ಸೂಚಿಸಿದ್ದಾರೆ. ಪೊಲೀಸರು ಉಮಾಳನ್ನೂ ಕರೆದು ವಿಚಾರಣೆ ಆರಂಭಿಸಿದ್ದಾರೆ. ಶವಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಅಳಿಸಲಾದ ಸಿಸಿಟಿವಿ ದೃಶ್ಯಗಳನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT