ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ) 
ರಾಜ್ಯ

ಮಳೆ ನಿಂತು ಹೋದ ಮೇಲೆ... ಫಾಗಿಂಗ್, ನೀರು ಪಂಪಿಂಗ್ ಕಾರ್ಯ ಪೂರ್ಣಗೊಳಿಸಿದ BBMP!

ಪ್ರವಾಹದಿಂದಾಗಿ ಸ್ಥಳಾಂತರಗೊಂಡಿರುವ 50 ಮನೆಗಳ ನಿವಾಸಿಗಳಿಗೆ ವಾಪಸ್ ಬರುವಂತೆ ಸೂಚಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ವಿಶೇಷವಾಗಿ ಚರಂಡಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು

ಬೆಂಗಳೂರು: ಮಹದೇವಪುರ ವಲಯದ ಕೆಆರ್ ಪುರಂನ ಹೊರಮಾವು ವಾರ್ಡ್‌ನಲ್ಲಿರುವ ಸಾಯಿಬಾಬಾ ಲೇಔಟ್‌ನಲ್ಲಿ ಪ್ರವಾಹ ಸಂಭವಿಸಿದ ಎರಡು ದಿನಗಳ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 180 ಮನೆಗಳನ್ನು ಒಳಗೊಂಡಿರುವ ಲೇಔಟ್‌ನಲ್ಲಿ ನೀರು ಹೊರ ಹಾಕುವ ಮತ್ತು ಫಾಗಿಂಗ್ ಕೆಲಸ ಪೂರ್ಣಗೊಳಿಸಿದೆ.

ಹೀಗಾಗಿ ಪ್ರವಾಹದಿಂದಾಗಿ ಸ್ಥಳಾಂತರಗೊಂಡಿರುವ 50 ಮನೆಗಳ ನಿವಾಸಿಗಳಿಗೆ ವಾಪಸ್ ಬರುವಂತೆ ಸೂಚಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ವಿಶೇಷವಾಗಿ ಚರಂಡಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ ಶಾಶ್ವತ ಪರಿಹಾರಕ್ಕಾಗಿ ರೈಲ್ವೆ ಇಲಾಖೆ ಸೇತುವೆ ಕಾಮಗಾರಿ ತ್ವರಿತಗೊಳಿಸಬೇಕಿದೆ. ರಕ್ಷಣೆ ಮತ್ತು ಪುನರ್ವಸತಿ ಕಾಮಗಾರಿ ಶುಕ್ರವಾರ ಮುಕ್ತಾಯಗೊಂಡಿದೆ. ಪ್ರವಾಹ ಮತ್ತು ಕೊಳಚೆ ನೀರನ್ನು ಪಂಪ್ ಮಾಡಲು, ಹೂಳು ತೆರವುಗೊಳಿಸಲು, ಬ್ಲೀಚಿಂಗ್ ಪೌಡರ್ ಸೇರಿಸಿದ ನೀರಿನಿಂದ ಮನೆಗಳನ್ನು ಸ್ವಚ್ಛಗೊಳಿಸಲು ಬಿಬಿಎಂಪಿ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಸೊಳ್ಳೆಗಳ ಕಾಟ ತಪ್ಪಿಸಲು ಸಂಜೆ ಫಾಗಿಂಗ್ ಕೂಡ ಮಾಡಲಾಗಿತ್ತು ಎಂದು ಮಹದೇವಪುರ ವಲಯದ ಜಂಟಿ ಆಯುಕ್ತೆ ಕೆ.ದಾಕ್ಷಾಯಿಣಿ ತಿಳಿಸಿದರು.

ಕಾಮಗಾರಿಯ ಮೇಲ್ವಿಚಾರಣೆ ನಡೆಸುತ್ತಿರುವ ಹೊರಮಾವು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿನಯ್ ಮಾತನಾಡಿ, ಹೆಬ್ಬಾಳ-ನಾಗವಾರ ಕಣಿವೆಯ 200 ಅಡಿಯ ನೀರು 20 ಅಡಿ ಸೇತುವೆ ಮೇಲೆ ಹರಿಯುತ್ತದೆ, ಸೇತುವೆ ಕಿರಿದಾಗಿರುವ ಕಾರಣ ಇಡೀ ಬಡಾವಣೆ ಜಲಾವೃತಗೊಳ್ಳುತ್ತದೆ ಇದರಲ್ಲಿ ಬಿಬಿಎಂಪಿಯಿಂದ ಯಾವುದೇ ತಪ್ಪಿಲ್ಲ ಎಂದು ಕಾಮಗಾರಿಯ ಮೇಲ್ವಿಚಾರಣೆ ನಡೆಸುತ್ತಿರುವ ಹೊರಮಾವು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿನಯ್ ಹೇಳಿದ್ದಾರೆ.

“ಸಂಪೂರ್ಣವಾಗಿ ಮನೆಗಳು ಜಲಾವೃತಗೊಂಡ 23 ಜನರಿಗೆ ಮೂರು ದಿನಗಳ ಕಾಲ ಹತ್ತಿರದ ಹೋಟೆಲ್‌ಗಳಲ್ಲಿ ವಸತಿ ಒದಗಿಸಲಾಗಿದೆ. ಅಲ್ಲದೆ, ಎಲ್ಲಾ ಪ್ರವಾಹ ಪೀಡಿತ ಮನೆಗಳಿಗೆ ಆಹಾರ ಮತ್ತು ನೀರಿನಂತಹ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಲಾಗಿದೆ ಎಂದು ವಿನಯ್ ಹೇಳಿದರು. ನೀರು ತೆರವು ಕೆಲಸವನ್ನು ಶೀಘ್ರವಾಗಿ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಅರ್ಕಾವತಿ ಲೇಔಟ್ ಬಳಿಯ ಗೆದ್ದಲಹಳ್ಳಿಗೆ ಸಮಾನಾಂತರವಾಗಿ ಈ ಲೇಔಟ್ ಇದ್ದು, ಉತ್ತಮ ಚರಂಡಿಗಳ ಅಭಿವೃದ್ಧಿಯ ಹೊಣೆ ಬಿಡಿಎ ಮೇಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ರೈಲ್ವೆ ಇಲಾಖೆಯಿಂದ ಗೆದ್ದಲಹಳ್ಳಿಯಲ್ಲಿ ಮಾರ್ಗ ವಿಸ್ತರಿಸಿದಿದ್ದರೆ ಪ್ರತಿ ಮಳೆಯ ಸಂದರ್ಭದಲ್ಲಿ ಸಾಯಿಬಾಬಾ ಲೇಔಟ್ ನಲ್ಲಿ ಪ್ರವಾಹ ಮುಂದುವರಿಯುತ್ತದೆ ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!