ಹೆಚ್ ಡಿ ಕುಮಾರಸ್ವಾಮಿ-ಡಿ ಕೆ ಶಿವಕುಮಾರ್  
ರಾಜ್ಯ

ನೈಸ್‌ ರಸ್ತೆ ವ್ಯಾಪ್ತಿಯಲ್ಲಿ HDK ಕುಟಂಬದ ಆಸ್ತಿ ಎಷ್ಟಿದೆ ಎಂದು ಬಹಿರಂಗಪಡಿಸಲಿ: ಡಿ.ಕೆ ಶಿವಕುಮಾರ್ ಸವಾಲು

ಕುಮಾರಸ್ವಾಮಿ ನನಗೆ ಸೇರಿದ ದಾಖಲೆಗಳನ್ನು ಹುಡುಕುತ್ತಿದ್ದಾರೆ. ಎಲ್ಲೆಲ್ಲೋ ಹುಡುಕುವ ಅಗತ್ಯವಿಲ್ಲ. ಎಲ್ಲವೂ ಇ.ಡಿ, ಸಿಬಿಐ ಬಳಿ ಇವೆ. ಅವರ ದಾಖಲೆ ಬಹಿರಂಗ ಮಾಡದಿದ್ದರೆ ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದರು.

ಬೆಂಗಳೂರು: ನೈಸ್‌ ರಸ್ತೆ ವ್ಯಾಪ್ತಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕುಟಂಬದ ಆಸ್ತಿ ಎಷ್ಟಿದೆ ಎಂದು ಬಹಿರಂಗಪಡಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ನನಗೆ ಸೇರಿದ ದಾಖಲೆಗಳನ್ನು ಹುಡುಕುತ್ತಿದ್ದಾರೆ. ಎಲ್ಲೆಲ್ಲೋ ಹುಡುಕುವ ಅಗತ್ಯವಿಲ್ಲ. ಎಲ್ಲವೂ ಇ.ಡಿ, ಸಿಬಿಐ ಬಳಿ ಇವೆ. ಅವರ ದಾಖಲೆ ಬಹಿರಂಗ ಮಾಡದಿದ್ದರೆ ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದರು. ವಿಶೇಷ ತನಿಖಾ ದಳವನ್ನು (ಎಸ್ಐಟಿ) ಶಿವಕುಮಾರ್ ತನಿಖಾ ಸಂಸ್ಥೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಕುಮಾರಸ್ವಾಮಿ ಅವರು ನನ್ನನ್ನು ಸದಾ ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ. ಅವರು ಹಾಗೂ ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕಲು ಹರಸಾಹಸ ಪಡುತ್ತಿದ್ದಾರೆ. ನನ್ನ ಎಲ್ಲಾ ದಾಖಲೆಗಳು ಇ.ಡಿ ಸಿಬಿಐ ಬಳಿ ಇವೆ.

ಹೊಸದಾಗಿ ಹುಡುಕುವುದೇನಿಲ್ಲ. ಅವರು ನನಗೆ ಕೇಳಿದ್ದರೆ ನಾನೇ ಅವರಿಗೆ ನನ್ನ ದಾಖಲೆಗಳನ್ನು ಒದಗಿಸುತ್ತಿದ್ದೆ. ನಾವು ಇನ್ನೂ ಅವರ ಸುದ್ದಿಗೆ ಹೋಗಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ತಿಳಿಸಿದರು.ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದರು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ, “ನಾನೇ ಅಭ್ಯರ್ಥಿ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೇ ಅಭ್ಯರ್ಥಿ” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT