ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಗಿಗ್ ಕಾರ್ಮಿಕರ ರಕ್ಷಣೆ ಕರಡು ಮಸೂದೆ ಮಂಡನೆ; ಸೆಸ್ ವಿಧಿಸಲು ಸರ್ಕಾರ ಚಿಂತನೆ

ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) 2024 ಮಸೂದೆಯನ್ನು ಸರ್ಕಾರವು ಮಂಡಿಸುವ ನಿರೀಕ್ಷೆಯಿದೆ.

ಬೆಂಗಳೂರು: ಸ್ವಿಗ್ಗಿ, ಜೊಮಾಟೊ, ಡಂಜೊ ಮತ್ತು ಓಲಾ ಮುಂತಾದ ಅಗ್ರಿಗೇಟರ್ ಪ್ಲಾಟ್‌ಫಾರ್ಮ್‌ಗಳ ಪ್ರತಿಯೊಂದು ವಹಿವಾಟಿನ ಮೇಲೆ ಸೆಸ್ ವಿಧಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದು, ಗಿಗ್ ಕಾರ್ಮಿಕರಿಗಾಗಿ ಕಲ್ಯಾಣ ನಿಧಿ ರಚಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) 2024 ಮಸೂದೆಯನ್ನು ಸರ್ಕಾರವು ಮಂಡಿಸುವ ನಿರೀಕ್ಷೆಯಿದೆ.

ಮುಂದಿನ ವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಸಂತೋಷ್ ಲಾಡ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಇದಾದ ಬಳಿಕ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸಲಾಗುವುದು. ಪ್ರತಿ ವಹಿವಾಟಿನ ಮೇಲೆ ಶೇ.2ರಷ್ಟು ಸೆಸ್ ವಿಧಿಸುವ ಪ್ರಸ್ತಾವನೆ ಇದೆ ಎಂದು ಮೂಲಗಳು ತಿಳಿಸಿದ್ದರೂ, ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಲಾಡ್ ಹೇಳಿದ್ದಾರೆ. ವಹಿವಾಟುಗಳ ಬಗ್ಗೆ ನಿಗಾ ಇಡಲು ಸರ್ಕಾರಕ್ಕೆ ಯಾವುದೇ ತಂತ್ರಜ್ಞಾನವಿಲ್ಲ ಮತ್ತು ಈ ನಿಟ್ಟಿನಲ್ಲಿ ಸಹಾಯ ಮಾಡಲು ಸರ್ಕಾರ ಅಗ್ರಿಗೇಟರ್ ಗಳ ಸಹಾಯ ಪಡೆಯಲಿದೆ.

Swiggy, Zomato, Dunzo, Zepto, Flipkart, Blinkit, Ola ಮತ್ತು Uber ಮುಂತಾದ ಅಗ್ರಿಗೇಟರ್ ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆಯನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರವು ಸಮೀಕ್ಷೆ ನಡೆಸಿಲ್ಲ. ಆದರೆ ಪ್ರತಿ ಗಂಟೆಗೆ ಲಕ್ಷಗಟ್ಟಲೆ ವಹಿವಾಟು ನಡೆಯುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತಾವಿತ ಸೆಸ್‌ನಲ್ಲಿ, ಗಿಗ್ ಕಾರ್ಮಿಕರಿಗೆ ಕೆಲಸದಲ್ಲಿರ ಅಪಾಯಗಳು ಎದುರಾಗುತ್ತವೆ, ಅವರು ರಸ್ತೆ ಅಪಘಾತಗಳಿಗೆ ಗುರಿಯಾಗುತ್ತಾರೆ. ಅವರು ರಸ್ತೆಗಳಲ್ಲಿ ಹೆಚ್ಚು ಸಮಯ ಕಳೆಯುವುದರಿಂದ, ಅವರು ಕಲುಷಿತ ಗಾಳಿಯನ್ನು ಉಸಿರಾಡುತ್ತಾರೆ, ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯ ವಿಮೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕಾಗಿ ಕಲ್ಯಾಣ ನಿಧಿಯನ್ನು ಬಳಸಿಕೊಳ್ಳೂಕೇಂದು ನಾವು ಬಯಸುತ್ತೇವೆ, ಎಂದು ಲಾಡ್ ವಿವರಿಸಿದ್ದಾರೆ. ಉದ್ದೇಶಿತ ಸೆಸ್ ಕುರಿತು ಶೀಘ್ರದಲ್ಲೇ ವಿವಿಧ ಸಭೆ ನಡೆಯಲಿದೆ. ಅವರು ಹೊಸ ಮಾರ್ಗಸೂಚಿಗಳನ್ನು ಪ್ರಸ್ತಾಪಿಸಿ ಸೆಸ್ ಕುರಿತು ಒಮ್ಮತಕ್ಕೆ ಬರಲಿ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.

ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯನ್ನು ರೂಪಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಗುರುವಾರ ನವದೆಹಲಿಯಲ್ಲಿ ಗಿಗ್ ಕಾರ್ಮಿಕರ ಸಂಘಗಳ ಪ್ರತಿನಿಧಿಗಳ ಜೊತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರು ಗಿಗ್ ಕಾರ್ಯಕರ್ತರಿಗೆ ವಿವಿಧ ಕಲ್ಯಾಣ ನಿಧಿಯ ಪ್ರಯೋಜನಗಳ ಬಗ್ಗೆ ಚರ್ಚಿಸಿದರು. ಕರ್ನಾಟಕದ ಕರಡು ಮಸೂದೆಯು ಕೇಂದ್ರ ಸರ್ಕಾರದ ಪ್ರಸ್ತಾವನೆಯೊಂದಿಗೆ ಘರ್ಷಣೆಯಾಗುವುದಿಲ್ಲ, ಇದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದು ಸಂತೋಷ್ ಲಾಡ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT