ವಂಚನೆ ಪ್ರಕರಣ ದೂರು ದಾಖಲಿಸಿದ್ದ ಮಹಿಳೆ 
ರಾಜ್ಯ

ಕೊನೆಗೂ ಸಂಧಾನ: ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ರೂ ವಂಚನೆ ಪ್ರಕರಣ ಹಿಂಪಡೆದ ಮಹಿಳೆ!

ದೂರುದಾರರಾದ ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಫುಲ್ಸಿಂಗ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ (48) ಅವರು ದಾಖಲಿಸಿದ್ದ ವಂಚನೆ ಪ್ರಕರಣವನ್ನು ಅವರು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಅವರ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಸುನೀತಾ ಚವ್ಹಾಣ್ (48) ಕೊನೆಗೂ ರಾಜಿ ಸಂಧಾನದ ಬಳಿಕ ತಾವು ದಾಖಲಿಸಿದ್ದ ಪ್ರಕರಣ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರರಾದ ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಫುಲ್ಸಿಂಗ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ (48) ಅವರು ದಾಖಲಿಸಿದ್ದ ವಂಚನೆ ಪ್ರಕರಣವನ್ನು ಅವರು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ TNIE ಗೆ ಮಾಹಿತಿ ನೀಡಿರುವ ಯಶವಂತಪುರದ ನಿವಾಸಿ ಸುನೀತಾ, ಪ್ರಕರಣವನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಈ ವಂಚನೆ ಪ್ರಕರಣ ಸಂಬಂಧ ಈ ವರೆಗೂ ಮೂವರನ್ನು ಬಂಧಿಸಲಾಗಿತ್ತು. ಅಲ್ಲದೆ ಪೊಲೀಸರು ಮತ್ತೋರ್ವ ಆರೋಪಿ ಗೋಪಾಲ್‌ಗಾಗಿ ಶೋಧ ನಡೆಸುತ್ತಿದ್ದಾರೆ ಎಂಬ ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಹೇಳಿದ್ದರು. ಈ ಬಗ್ಗೆಯೂ ಪ್ರತಿಕ್ರಿಯಿಸಿರುವ ಸುನಿತಾ ಅವರು, 'ಸಮಸ್ಯೆ ಬಗೆಹರಿದಿದ್ದರಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ಹೇಳಿದರು.

ಪ್ರಹ್ಲಾದ್ ಜೋಷಿ ಒಳ್ಳೆಯವರು, ಅವರ ಬಗ್ಗೆ ನನಗೆ ಧ್ವೇಷವಿಲ್ಲ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತುಂಬಾ ಒಳ್ಳೆಯವರು. ಅವರ ಬಗ್ಗೆ ನನಗೆ ಯಾವುದೇ ದೂರುಗಳಿಲ್ಲ. ಅವರ ಬಗ್ಗೆ ನನಗೆ ಧ್ವೇಷವಿಲ್ಲ. ನನಗೆ ವಂಚನೆಯಾಗಿದ್ದರಿಂದ ಮಾತ್ರ ನಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದೇನೆ. ಈಗ ಪ್ರಕರಣ ಬಗೆಹರಿದಿದೆ. ಹೀಗಾಗಿ ಪ್ರಕರಣ ವಾಪಸ್ ಪಡೆಯುತ್ತೇನೆ. ಅವರಿಗೆ ನೀಡಿದ ಹಣ ಮೂರ್ನಾಲ್ಕು ಮಂದಿಗೆ ಸೇರಿದ್ದು, ಅದನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತಿದೆ ಎಂದು ಸುನಿತಾ ಹೇಳಿದರು.

ಪೊಲೀಸರ ಸ್ಪಷ್ಟನೆ

ವಂಚನೆ ಪ್ರಕರಣ ಸಂಬಂಧ ಬಸವೇಶ್ವರನಗರ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದು, ದೂರುದಾರರು ರಾಜಿ ಅರ್ಜಿ ಸಲ್ಲಿಸುವ ಮೂಲಕ ದೂರನ್ನು ಹಿಂಪಡೆಯಲು ನ್ಯಾಯಾಲಯವನ್ನು ಸಂಪರ್ಕಿಸಬೇಕು... ನಾವು ಸೆಕ್ಷನ್ 164 CrPC ಅಡಿಯಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.

ಏತನ್ಮಧ್ಯೆ, ತನಗೆ ಸಹೋದರಿ ಇಲ್ಲ, ಮತ್ತು ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿಯನ್ನು ತನ್ನ ಸಹೋದರಿ ಎಂದು ನಮೂದಿಸಿರುವುದು ವಾಸ್ತವಿಕವಲ್ಲ ಮತ್ತು ತಾನು ಮತ್ತು ಗೋಪಾಲ್ 32 ವರ್ಷಗಳ ಹಿಂದೆಯೇ ಬೇರ್ಪಟ್ಟಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT