ರಾಷ್ಟ್ರಪತಿ ದ್ರೌಪದಿ ಮುರ್ಮು  
ರಾಜ್ಯ

ನೋಂದಣಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಜಿಲ್ಲಾ ರಿಜಿಸ್ಟ್ರಾರ್, ಸ್ವಯಂ ಪ್ರೇರಿತವಾಗಿ ಅಥವಾ ಯಾವುದೇ ತೊಂದರೆಗೊಳಾದ ವ್ಯಕ್ತಿಯಿಂದ ಸ್ವೀಕರಿಸಿದ ದೂರಿನ ಮೇಲೆ ನೋಟಿಸ್ ಜಾರಿ ಮಾಡಬಹುದಾಗಿದೆ.

ಬೆಂಗಳೂರು: ಉಪ–ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 8ರಂದು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಮಸೂದೆ ಜಾರಿಗೆ ಶನಿವಾರ ಅಧಿಸೂಚನೆ ಹೊರಡಿಸಿದೆ.

ಈ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ಅದನ್ನು ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು. ಮಸೂದೆಯಲ್ಲಿ ಕೆಲವು ಅಂಶಗಳನ್ನು ಉಲ್ಲೇಖಿಸಿ, ‘ತಿದ್ದುಪಡಿ ಪ್ರಕಾರ, ನೋಂದಣಿಗೆ ಸಂಬಂಧಿಸಿದಂತೆ ಡಿಜಿಟಲ್‌ ಸಹಿ ಇರುವ ದಾಖಲೆಗಳನ್ನು ನೀಡಲಾಗುತ್ತದೆ. ಇದು ಹಣಕಾಸು ವಂಚನೆ ಮತ್ತು ನೋಂದಣಿ ಪ್ರಕ್ರಿಯೆ ವೇಳೆಯಲ್ಲಿ ವಂಚನೆಗೆ ಕಾರಣವಾಗಬಹುದು. ಈ ಅಪಾಯವನ್ನು ಬಹಳ ಎಚ್ಚರದಿಂದ ನಿರ್ವಹಿಸಬೇಕು’ ಎಂದಿದ್ದರು.

ಇದಕ್ಕೆ ಸುದೀರ್ಘವಾದ ವಿವರಣೆಗಳ ಸಹಿತ ಕಂದಾಯ ಇಲಾಖೆಯು ರಾಜ್ಯಪಾಲರಿಗೆ ಸ್ಪಷ್ಟೀಕರಣ ನೀಡಿತ್ತು. ಅಲ್ಲದೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಈ ಮಸೂದೆ ಕುರಿತು ವಿವರಣೆ ನೀಡಿದ್ದರು. ಆನಂತರ ರಾಷ್ಟ್ರಪತಿಯ ಅಂಕಿತಕ್ಕೆ ಮೀಸಲಿಟ್ಟು, ಅಂಕಿತ ಹಾಕಿದ್ದ ರಾಜ್ಯಪಾಲರು, ಸೆ.19ರಂದು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದರು. ಜಿಲ್ಲಾ ರಿಜಿಸ್ಟ್ರಾರ್, ಸ್ವಯಂ ಪ್ರೇರಿತವಾಗಿ ಅಥವಾ ಯಾವುದೇ ತೊಂದರೆಗೊಳಾದ ವ್ಯಕ್ತಿಯಿಂದ ಸ್ವೀಕರಿಸಿದ ದೂರಿನ ಮೇಲೆ ನೋಟಿಸ್ ಜಾರಿ ಮಾಡಬಹುದಾಗಿದೆ. ನಕಲಿ ದಾಖಲೆಗಳ ನೋಂದಣಿಗೆ ದಂಡವನ್ನು ವಿಧಿಸಲು ಮತ್ತು ಕಂಪನಿಗಳಿಂದ ನಕಲಿ ದಾಖಲೆಗಳ ನೋಂದಣಿಯೊಂದಿಗೆ ನಿರ್ಬಂಧ ಹೇರಲು ಆ ಮಸೂದೆ ಸಹಾಯ ಮಾಡುತ್ತದೆ.

ನಕಲಿ ದಾಖಲೆಗಳು ಮತ್ತು ಕಾನೂನಿನಿಂದ ನಿಷೇಧಿಸಲಾದ ಇತರ ದಾಖಲೆಗಳ ನೋಂದಣಿಯನ್ನು ನಿರಾಕರಿಸುವ ಅಧಿಕಾರವನ್ನು ರಿಜಿಸ್ಟ್ರಾರ್‌ಗೆ ನೀಡುವ ಮಸೂದೆಯನ್ನು ಜುಲೈ 2023 ರಲ್ಲಿ ಅಸೆಂಬ್ಲಿಯಲ್ಲಿ ಮಂಡಿಸಲಾಯಿತು. ಇದನ್ನು ಕೇಂದ್ರದ ಅನುಮೋದನೆಗೆ ಕಳುಹಿಸಲಾಗಿದೆ.

ತಿದ್ದುಪಡಿ ಮಾಡಲಾದ ಕಾಯಿದೆಯು ಸ್ವಯಂ ಪ್ರೇರಿತವಾಗಿ ಅಥವಾ ದೂರಿನ ಮೇರೆಗೆ ಕೆಲವು ಪ್ರಕರಣಗಳಲ್ಲಿ ನಕಲಿ ದಾಖಲೆಗಳ ನೋಂದಣಿಯನ್ನು ರದ್ದುಗೊಳಿಸಲು ಜಿಲ್ಲಾ ರಿಜಿಸ್ಟ್ರಾರ್‌ಗೆ ಅಧಿಕಾರವನ್ನು ನೀಡುತ್ತದೆ ಮತ್ತು ಜಿಲ್ಲಾ ರಿಜಿಸ್ಟ್ರಾರ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವನ್ನು ನೀಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್.ಕೆ ಅಡ್ವಾಣಿ ಹೊಗಳಿದ ಶಶಿ ತರೂರ್; ಅಂತರ ಕಾಯ್ದುಕೊಂಡ ಕಾಂಗ್ರೆಸ್

Bihar Polls 2025: ಯಾರಿಗೆ ಬಿಹಾರ? ಮತ್ತೆ ಮಹಿಳಾ ಮತದಾರರು ನಿರ್ಧರಿಸಲಿದ್ದಾರೆಯೇ?

RSS ದೇಣಿಗೆ ಕುರಿತು ಮೋಹನ್ ಭಾಗವತ್ ಗೆ 11 ಪ್ರಶ್ನೆ ಕೇಳಿದ ಸಚಿವ ಪ್ರಿಯಾಂಕ್ ಖರ್ಗೆ

Ironman Challenge: ಅಣ್ಣಾಮಲೈ ಭಾಗಿ; ಸತತ 2ನೇ ಬಾರಿಗೆ ಸಂಸದ ಸೂರ್ಯ ಐರನ್‌ಮ್ಯಾನ್ ಸಾಧನೆ!

ಕೂಡ್ಲಿಗಿ: ಏಳನೇ 'ಗ್ಯಾರಂಟಿ'ಯಾಗಿ ಕೆರೆಗಳಿಗೆ ನೀರು! ಡಿಸಿಎಂ ಡಿ.ಕೆ ಶಿವಕುಮಾರ್

SCROLL FOR NEXT