ಬಡಾವಣೆ ಜಲಾವೃತಗೊಂಡಿರುವುದು. 
ರಾಜ್ಯ

ನಗರದಲ್ಲಿ ಮುಂದುವರೆದ ಮಳೆ ಆರ್ಭಟ: ಸಾಯಿ ಲೇಔಟ್‌ ಮತ್ತೆ ಜಲಾವೃತ, ಅಧಿಕಾರಿಗಳಿಗೆ ಹಿಡಿಶಾಪ

ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಲೇಔಟ್ ನಲ್ಲಿ ಮೊನ್ನೆಯಷ್ಟೇ ಫೈರ್ ಇಂಜಿನ್ ಮೂಲಕ ನೀರನ್ನು ಹೊರ ಹಾಕಲಾಗಿತ್ತು. ಈಗ ಲೇಔಟ್ ಮತ್ತೆ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣ ಆರ್ಭಟ ಮುಂದುವರೆದಿದ್ದು, ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡಿನ ಸಾಯಿಬಾಬಾ ಲೇಔಟ್‌ ಮತ್ತೆ ಜಲಾವೃತಗೊಂಡಿದೆ.

ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಲೇಔಟ್ ನಲ್ಲಿ ಮೊನ್ನೆಯಷ್ಟೇ ಫೈರ್ ಇಂಜಿನ್ ಮೂಲಕ ನೀರನ್ನು ಹೊರ ಹಾಕಲಾಗಿತ್ತು. ಈಗ ಲೇಔಟ್ ಮತ್ತೆ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ.

ಪ್ರೆಸ್ಟೀಜ್ ಶಾಲೆಯ ಶಿಕ್ಷಕಿ ನೀಲುಫುರ್ ಅಹಮದ್ ಅವರು ಮಾತನಾಡಿ, ಭಾರೀ ಮಳೆಯ ಪರಿಣಾಮ ನೀರು ತುಂಬಿಕೊಂಡು ಸಂಪ್ ಮೋಟಾರ್ ಹಾಳಾಗಿತ್ತು. ಎಲೆಕ್ಟ್ರಿಕಲ್ ಕೆಲಸಕ್ಕೆ ರೂ.10,000 ಖರ್ಟು ಮಾಡಿದ್ದೆ. ಇದೀಗ ಮತ್ತೆ ಮನೆಗೆ ನೀರು ನುಗ್ಗಿದೆ. ಮನೆಯಲ್ಲಿ ಮೂರು ಇಂಚುಗಳಷ್ಟು ನೀರಿದೆ. ಹಾಸಿಗೆ, ಸೋಫಾ ಎಲ್ಲವೂ ಹಾಳಾಗಿದೆ. ಬಡಾವಣೆಯಲ್ಲಿ ಕಳೆದ 10 ವರ್ಷಗಳಿಂದ ಇದೇ ರೀತಿಯ ಸಮಸ್ಯೆ ಕಾಡುತ್ತಿದೆ. ಶಾಸಕ ಬೈರತಿ ಬಸವರಾಜ್ ಆಗಲಿ, ಬಿಬಿಎಂಪಿ ಅಧಿಕಾರಿಗಳಾಗಲಿ ನಮ್ಮ ಕಷ್ಟದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸ್ಥಳೀಯ ನಿವಾಸಿಗಳು ನ್ಯಾಯಾಲಯ ಪ್ರವೇಶಿಸಿ, ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಇದ್ದಾರೆ. ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ನೀರಿನಿಂದ ಹರಡುವ ಸೋಂಕು, ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗಿ ಅನೇಕರು ಬಲಿಯಾಗುತ್ತಾರೆ ಎಂದು ಬಡಾವಣೆಯ ಹಿರಿಯ ನಾಗರಿಕರೊಬ್ಬರು ಹೇಳಿದ್ದಾರೆ.

ಈ ಮಧ್ಯೆ, ಬಿಡಿಎಯಿಂದ ಯಾವುದೇ ಅನುಮತಿಯಿಲ್ಲದೆ ಅಕ್ರಮವಾಗಿ ಲೇಔಟ್ ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

ಲೇಔಟ್‌ನಲ್ಲಿ ರೈಲ್ವೆ ಸೇತುವೆಯ ಕೆಳಗೆ ಅಭಿವೃದ್ಧಿ ಕಾಮಗಾರಿಯನ್ನು ಕಾರ್ಯಗತಗೊಳಿಸಲಾಗುತ್ತಿದೆ. ಪ್ರಸ್ತುತ, ಮಳೆ ನೀರು ಚರಂಡಿಯು ಕೇವಲ 20 ಅಡಿ ಅಗಲದ ಪ್ರದೇಶವನ್ನು ಹೊಂದಿದ್ದು, ಮಳೆಯ ಸಮಯದಲ್ಲಿ ಹೆಬ್ಬಾಳ-ನಾಗವಾರ ಮೇಲ್ಭಾಗದಿಂದ ನೀರು ಹರಿದು ಬಂದಾಗ ಪ್ರವಾಹ ಪರಿಸ್ಥಿತಿ ಎದುರಾಗುತ್ತಿದೆ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT