ಹಳಿ ಮೇಲೆ ಬಿದ್ದ ಕಲ್ಲು ಪರಿಶೀಲನೆ  
ರಾಜ್ಯ

ಮಂಗಳೂರು: ರೈಲು ಹಳಿ ಮೇಲೆ ಕಲ್ಲು ಬಿದ್ದು ಆತಂಕ ಸೃಷ್ಟಿ

ಕೇರಳ ಮತ್ತು ಮಂಗಳೂರು ನಡುವೆ ಎರಡು ರೈಲುಗಳು ಹಳಿಯಲ್ಲಿ ಹಾದುಹೋದ ನಂತರ ಸ್ಥಳೀಯರು ಘಟನೆಯ ಬಗ್ಗೆ ಉಳ್ಳಾಲ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು.

ಮಂಗಳೂರು: ಕರಾವಳಿಯ ತೊಕ್ಕೊಟ್ಟು ಮೇಲ್ಸೇತುವೆ ಬಳಿಯ ರೈಲ್ವೆ ಹಳಿ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದು ಹೋಗಿದ್ದು, ಶನಿವಾರ ರಾತ್ರಿ ರೈಲುಗಳು ಅವುಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಸದ್ದು ಕೇಳಿಸಿತು.

ಕೇರಳ ಮತ್ತು ಮಂಗಳೂರು ನಡುವೆ ಎರಡು ರೈಲುಗಳು ಹಳಿಯಲ್ಲಿ ಹಾದುಹೋದ ನಂತರ ಸ್ಥಳೀಯರು ಘಟನೆಯ ಬಗ್ಗೆ ಉಳ್ಳಾಲ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು.

ರಾತ್ರಿ 9 ಗಂಟೆ ಸುಮಾರಿಗೆ ಸ್ಥಳೀಯರಿಗೆ ಶಬ್ದ ಕೇಳಿಸಿದ್ದು, ಸ್ಥಳೀಯರ ದೂರಿನ ಮೇರೆಗೆ ರೈಲ್ವೇ ಪೊಲೀಸರು ರಾತ್ರಿ ಗಸ್ತು ನಡೆಸಿದಾಗ ಹಳಿಯಲ್ಲಿ ಪುಡಿಯಾದ ಕಲ್ಲುಗಳು ಪತ್ತೆಯಾಗಿವೆ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.

ಹಳಿ ಬಳಿ ಮಕ್ಕಳು ಆಟವಾಡುತ್ತಿರುವಾಗ ಕಲ್ಲುಗಳನ್ನು ಇಡುತ್ತಿರುವ ಬಗ್ಗೆ ಅನುಮಾನ ಬಂತು. ರೈಲ್ವೆ ಇಲಾಖೆಯು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ನಾವು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದೇವೆ. ಯಾವುದೇ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕಲ್ಲುಗಳನ್ನು ಹಳಿ ಮೇಲೆ ಇರಿಸುವುದು ಪತ್ತೆಯಾದರೆ ನಾವು ಬಂಧಿಸುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಹಳಿಯ ಎರಡೂ ಬದಿಗಳಲ್ಲಿ ಕಲ್ಲುಗಳನ್ನು ಜೋಡಿಸಲಾಗಿದೆ. ಘಟನೆಯ ಒಂದು ಗಂಟೆ ಮೊದಲು ಇಬ್ಬರು ಅಪರಿಚಿತರು ಹಳಿ ಪಕ್ಕದಲ್ಲಿ ನಡೆದುಕೊಂಡು ಹೋಗುವುದನ್ನು ಕೆಲವು ಮಹಿಳೆಯರು ನೋಡಿದ್ದಾರೆ, ಇದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಘಟನೆ ಕುರಿತು ರೈಲ್ವೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT