ಸಿಎಂ ಸಿದ್ದರಾಮಯ್ಯ CM Siddaramaiah
ರಾಜ್ಯ

ರಾಜ್ಯದಲ್ಲಿ 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಪೊಲೀಸ್ ಸಂಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕರ್ತವ್ಯದ ವೇಳೆ ಹುತಾತ್ಮರಾದ ಕರ್ನಾಟಕದಲ್ಲಿ 12 ಮಂದಿ ಸೇರಿದಂತೆ ದೇಶದಲ್ಲಿ 216 ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ, ಪೊಲೀಸರಿಗೆ ಮನೆ ನೀಡುವುದು ಸರ್ಕಾರದ ಕರ್ತವ್ಯ. 2025 ರ ವೇಳೆಗೆ 10,000 ವಸತಿ ಕ್ವಾರ್ಟಸ್ ನಿರ್ಮಿಸುತ್ತೇವೆ ಎಂದರು.

ಬೆಂಗಳೂರು: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಮತ್ತು 2025 ರ ವೇಳೆಗೆ 10,000 ಪೊಲೀಸ್ ಕ್ವಾರ್ಟರ್ಸ್‌ಗಳನ್ನು ನಿರ್ಮಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಘೋಷಿಸಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕರ್ತವ್ಯದ ವೇಳೆ ಹುತಾತ್ಮರಾದ ಕರ್ನಾಟಕದಲ್ಲಿ 12 ಮಂದಿ ಸೇರಿದಂತೆ ದೇಶದಲ್ಲಿ 216 ಪೊಲೀಸರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ, ಪೊಲೀಸರಿಗೆ ಮನೆ ನೀಡುವುದು ಸರ್ಕಾರದ ಕರ್ತವ್ಯ. 2025 ರ ವೇಳೆಗೆ 10,000 ವಸತಿ ಕ್ವಾರ್ಟಸ್ ನಿರ್ಮಿಸುತ್ತೇವೆ, ಇದಕ್ಕಾಗಿ 2,000 ಕೋಟಿ ರೂ. ಮೀಸಲಿಡಲಾಗಿದೆ ಎಂದರು.

100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುವುದು, ಇದಕ್ಕಾಗಿ 200 ಕೋಟಿ ರೂ. ಮಂಜೂರು ಮಾಡಲಾಗಿದೆ. ಏಳು ಹೊಸ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು, ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂತಹ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಸಮಾಜದಲ್ಲಿ ಶಾಂತಿ ಕಾಪಾಡಲು ಕಾನೂನು ಮತ್ತು ಸುವ್ಯವಸ್ಥೆಯ ಮಹತ್ವವನ್ನು ಒತ್ತಿ ಹೇಳಿದ ಸಿದ್ದರಾಮಯ್ಯ, ಶಾಂತಿಯುತ ಸಮಾಜವು ಹೂಡಿಕೆಯನ್ನು ಆಕರ್ಷಿಸುತ್ತದೆ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ, ತಲಾ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಆರ್ಥಿಕತೆಯನ್ನು ಸುಧಾರಿಸುತ್ತದೆ ಎಂದು ಹೇಳಿದರು.

ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಅಪಘಾತಗಳ ಸಂದರ್ಭದಲ್ಲಿ ತ್ವರಿತ ಪ್ರತಿಕ್ರಿಯೆಗಾಗಿ, 200 ವಾಹನಗಳು ಹೆದ್ದಾರಿಗಳಲ್ಲಿ ಗಸ್ತು ತಿರುಗುತ್ತಿವೆ ಮತ್ತು ಸಾರ್ವಜನಿಕ ಸ್ಥಳಗಳ ನಿಗಾವಣೆಗಾಗಿ 6,000 ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಲಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರಿಗೆ ಕರ್ತವ್ಯ ನಿರ್ವಹಿಸಲು ರಾಜ್ಯ ಸರ್ಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!