ಪ್ರಿಯಾಂಕ್ ಖರ್ಗೆ 
ರಾಜ್ಯ

ಫಿನ್ ಟೆಕ್ ವಲಯದ ಉತ್ತೇಜನಕ್ಕೆ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ; ರಾಜ್ಯ ಸರ್ಕಾರದ ಘೋಷಣೆ

ಐದು ವರ್ಷಗಳ ಅವಧಿಯಲ್ಲಿ ಈ ಕೇಂದ್ರದ ಕಾರ್ಯಾಚರಣೆಗಳಿಗಾಗಿ ಅಂದಾಜು ಒಟ್ಟು 13. 24 ಕೋಟಿ ರೂ. ಮೀಸಲು ಇಡಲಾಗಿದೆ. ಇನ್ ಕ್ಯೂಬೇಷನ್ ಮತ್ತು ವೇಗವರ್ಧಕ ಕಾರ್ಯಕ್ರಮದ ವೆಚ್ಚವನ್ನು ರೂ. 8. 19 ಕೋಟಿ ಎಂದು ಅಂದಾಜಿಸಲಾಗಿದೆ

ಬೆಂಗಳೂರು: ಫಿನ್‌ಟೆಕ್‌ ವಲಯದ ಉತ್ತೇಜನಕ್ಕಾಗಿ ನಗರದ IIMನಲ್ಲಿ NSRCEL ಸಹಭಾಗಿತ್ವದಲ್ಲಿ ಮೊದಲ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ಸ್ಥಾಪಿಸುವುದಾಗಿ ರಾಜ್ಯ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ- ತಂತ್ರಜ್ಞಾನ ಇಲಾಖೆಯು ಘೋಷಿಸಿದೆ.

ಕರ್ನಾಟಕದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಫಿನ್ ಟೆಕ್ ಉದ್ಯಮಶೀಲ ಪರಿಸರ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ, ನಾವೀನ್ಯತೆಗಳನ್ನು ಸುಗಮಗೊಳಿಸುವ ಮತ್ತು ಹಣಕಾಸು ತಂತ್ರಜ್ಞಾನ ವಲಯದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ವ್ಯಾಪಕ ಬೆಂಬಲ ನೀಡುವುದರೊಂದಿಗೆ ಫಿನ್‌ಟೆಕ್‌ ವಲಯದ ಬೆಳವಣಿಗೆಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಇಲಾಖೆ ಸೋಮವಾರ ಹೊರಡಿಸಿರುವ ವಿಡಿಯೋ ಆದೇಶದಲ್ಲಿ ತಿಳಿಸಿದೆ.

ಐದು ವರ್ಷಗಳ ಅವಧಿಯಲ್ಲಿ ಈ ಕೇಂದ್ರದ ಕಾರ್ಯಾಚರಣೆಗಳಿಗಾಗಿ ಅಂದಾಜು ಒಟ್ಟು 13. 24 ಕೋಟಿ ರೂ. ಮೀಸಲಿಡಲಾಗಿದೆ. ಇನ್ ಕ್ಯೂಬೇಷನ್ ಮತ್ತು ವೇಗವರ್ಧಕ ಕಾರ್ಯಕ್ರಮದ ವೆಚ್ಚ ರೂ. 8.19 ಕೋಟಿ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಕೌಶಲ್ಯ ಮತ್ತು ತರಬೇತಿ ಕಾರ್ಯಕ್ರಮಗಳಿಗೆ 5. 04 ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದೆ.

ಐಐಎಂನ NSRCEL (ನಡತೂರ್ ಎಸ್ ರಾಘವನ್ ಸೆಂಟರ್ ಫಾರ್ ಎಂಟರ್‌ಪ್ರೆನ್ಯೂರಿಯಲ್ ಲರ್ನಿಂಗ್ ಸಂಸ್ಥೆ ಸೆಂಟರ್ ಆಫ್ ಎಕ್ಸಲೆನ್ಸ್ ಮುನ್ನಡೆಸಲಿದೆ ಎಂದು ಇಲಾಖೆ ಹೇಳಿದೆ. ಈ ಸೆಂಟರ್ ಆಫ್ ಎಕ್ಸಲೆನ್ಸ್ ಕರ್ನಾಟಕವನ್ನು ಭಾರತದ ಫಿನ್‌ಟೆಕ್ ರಾಜಧಾನಿಯಾಗಿ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸ್ಟಾರ್ಟ್‌ಅಪ್‌ಗಳಿಗೆ ಸಮಗ್ರ ಬೆಂಬಲದೊಂದಿಗೆ ಐಐಎಂ ಬೆಂಗಳೂರಿನ ಪರಿಣತಿಯನ್ನು ಬಳಸಿಕೊಳ್ಳುವ ಮೂಲಕ ಫಿನ್‌ಟೆಕ್ ಉದ್ಯಮಗಳ ಬೆಳವಣಿಗೆಯನ್ನು ವೇಗಗೊಳಿಸುವುದು, ಡಿಜಿಟಲ್ ಆರ್ಥಿಕತೆಯ ಬೇಡಿಕೆಗಳನ್ನು ಪೂರೈಸಲು ಸಜ್ಜಾದ ನುರಿತ ಉದ್ಯೋಗಿಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ. ಭವಿಷ್ಯದಲ್ಲಿ ಹಣಕಾಸಿನಲ್ಲಿ ಹೂಡಿಕೆ ಮಾಡುತ್ತೇವೆ. ಈ ಪಾಲುದಾರಿಕೆಯು ನಮ್ಮ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಹೊಸ ಪರಿಹಾರ ನೀಡುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT